ಶ್ರೀಮಂಗಲ, ಜು. 3: ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ನೂತನವಾಗಿ ನೇಮಕವಾಗಿರುವ ಮುಕ್ಕಾಟಿರ ಶಿವು ಮಾದಪ್ಪ ಅವರನ್ನು ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾಅಚ್ಚಯ್ಯ ಹಾರಹಾಕಿ ಅಭಿನಂದಿಸಿ ಶುಭಾಶಯ ಕೋರಿದರು.ಪೊನ್ನಂಪೇಟೆ ಸ್ಪೋಟ್ರ್ಸ್ ಕ್ಲಬ್‍ಗೆ ಕಾರ್ಯನಿಮಿತ್ತ ಆಗಮಿಸಿದ್ದ ವೀಣಾ ಅಚ್ಚಯ್ಯ ಅವರು ಶುಭಕೋರಿ, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಜಿಲ್ಲೆಯಲ್ಲಿ ಸಂಘಟಿಸಿ, ಮುಂದಿನ ಚುನಾವಣೆಯಲ್ಲಿ ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರವನ್ನು ಕಾಂಗ್ರೆಸ್ ಪಕ್ಷ ಮರಳಿ ಪಡೆಯುವಂತೆ ಆಗಲಿ ಎಂದು ಹಾರೈಸಿದರು. ಮುಖ್ಯ ಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರದ ಅಭಿವೃದ್ಧಿಕಾರ್ಯ, ವಿವಿಧ ಯೋಜನೆ, ರೈತರ ಸಾಲಮನ್ನಾ ಇತ್ಯಾದಿ ಜನಪರ ಕಾರ್ಯಕ್ರಮಗಳ ಬಗ್ಗೆ ಜನ ಜಾಗೃತಿ ಕೈಗೊಳ್ಳುವಂತೆ ಸಲಹೆ ನೀಡಿದರು.

ಈ ಸಂದÀರ್ಭ ಪೊನ್ನಂಪೇಟೆ ವಲಯ ಕಾಂಗ್ರೆಸ್ ಅಧ್ಯಕ್ಷ ಮತ್ರಂಡ ದಿಲ್ಲು, ಡಿ.ಸಿ.ಸಿ ಉಪಾಧ್ಯಕ್ಷ ಪೆಮ್ಮಂಡ ಪೊನ್ನಪ್ಪ, ಹುದಿಕೇರಿ ಗ್ರಾ,ಪಂ ಅಧ್ಯಕ್ಷೆ ಮತ್ರಂಡ ರೇಖಾ ಪೊನ್ನಪ್ಪ, ಪುಚ್ಚಿಮಾಡ ಜಗದೀಶ್, ಹುದಿಕೇರಿ ವಲಯ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ಪ್ರಧಾನ ಕಾರ್ಯದರ್ಶಿ ಆಲಿರ ಸಾದಲಿ, ಹುದಿಕೇರಿ ಗ್ರಾ,ಪಂ ಸದಸ್ಯ ಚಂಗುಲಂಡ ಸೂರಜ್, ಪ್ರಮುಖರಾದ ಚಂಗುಲಂಡ ಈಶ, ಚಂಗುಲಂಡ ತಮ್ಮುಣಿ, ಚಂಗುಲಂಡ ರಾಯ್ ಸತೀಶ್, ಪುಲಿಯಂಡ ಜಗದೀಶ್ ಮುಂತಾದವರು ಹಾಜರಿದ್ದರು.