ನಾಪೆÉÇೀಕ್ಲು, ಜು. 3: ನಾಪೆÇೀಕ್ಲು ವಿಭಾಗದಲ್ಲಿ ವಿದ್ಯುತ್ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ಈ ವಿಭಾಗದ ಬಿಜೆಪಿ ಕಾರ್ಯಕರ್ತರು ಮತ್ತು ಸಾರ್ವಜನಿಕರು ನಾಪೆÇೀಕ್ಲು ಚೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.ಇಲಾಖೆ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ಚೆಸ್ಕಾಂ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಸ್ಥಳಕ್ಕೆ ಆಗಮಿಸಬೇಕೆಂದು ಪಟ್ಟು ಹಿಡಿದರು.ಅವರ ಪ್ರತಿನಿಧಿಯಾಗಿ ಆಗಮಿಸಿದ ಅಭಿಯಂತರ ದೊಡ್ಡಮನಿ ಅವರೊಂದಿಗೆ ಮಾತನಾಡಿದ ಜಿಲ್ಲಾ ಪಂಚಾಯಿತಿ ಸದಸ್ಯ ಪಾಡಿಯಮ್ಮಂಡ ಮುರಳಿ ನಾಪೆÉÇೀಕ್ಲು, ಜು. 3: ನಾಪೆÇೀಕ್ಲು ವಿಭಾಗದಲ್ಲಿ ವಿದ್ಯುತ್ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ಈ ವಿಭಾಗದ ಬಿಜೆಪಿ ಕಾರ್ಯಕರ್ತರು ಮತ್ತು ಸಾರ್ವಜನಿಕರು ನಾಪೆÇೀಕ್ಲು ಚೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಇಲಾಖೆ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ಚೆಸ್ಕಾಂ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಸ್ಥಳಕ್ಕೆ ಆಗಮಿಸಬೇಕೆಂದು ಪಟ್ಟು ಹಿಡಿದರು.

ಅವರ ಪ್ರತಿನಿಧಿಯಾಗಿ ಆಗಮಿಸಿದ ಅಭಿಯಂತರ ದೊಡ್ಡಮನಿ ಅವರೊಂದಿಗೆ ಮಾತನಾಡಿದ ಜಿಲ್ಲಾ ಪಂಚಾಯಿತಿ ಸದಸ್ಯ ಪಾಡಿಯಮ್ಮಂಡ ಮುರಳಿ ಇಲಾಖೆಯ ಕೆಲಸವನ್ನು ಬಿಟ್ಟು ಖಾಸಗಿ ಕೆಲಸ ನಿರ್ವಹಿಸುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಇವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸಮಸ್ಯೆ ಬಗ್ಗೆ ತಿಳಿದುಕೊಂಡ ಅಭಿಯಂತರ ದೊಡ್ಡಮನಿ ಇಂಜಿನಿಯರ್ ನೇಮಕಾತಿ ಪ್ರಕ್ರಿಯೆಯಲ್ಲಿದೆ. ಒಂದೂವರೆ ತಿಂಗಳ ಒಳಗಾಗಿ ಇಲ್ಲಿಗೆ ನೂತನ ಇಂಜಿನಿಯರ್ ನೇಮಿಸಲು ಕ್ರಮಕೈಗೊಳ್ಳಲಾಗುವದು. ಇಲಾಖೆಯ ಲೈನ್‍ಮೆನ್‍ಗಳು ಖಾಸಗಿ ಕಾಮಗಾರಿಯಲ್ಲಿ ತೊಡಗಿಕೊಂಡರೆ ಅವರ ಬಗ್ಗೆ ಲಿಖಿತವಾಗಿ ದೂರು ನೀಡಿದರೆ ಅಂಥವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವದು. ಮುಂದಿನ ದಿನಗಳಲ್ಲಿ ಈ ವಿಭಾಗದ ವಿದ್ಯುತ್ ಸಮಸ್ಯೆಯನ್ನು ಪರಿಹರಿಸಲು ಶ್ರಮಿಸಲಾಗುವದು ಎಂದರು.

ಪ್ರತಿಭಟನೆಯಲ್ಲಿ ಬಿಜೆಪಿ ಸ್ಥಾನೀಯ ಸಮಿತಿ ಅಧ್ಯಕ್ಷ ಶಿವಚಾಳಿಯಂಡ ಅಂಬಿ ಕಾರ್ಯಪ್ಪ, ಗ್ರಾ.ಪಂ. ಸದಸ್ಯ ಶಿವಚಾಳಿಯಂಡ ಜಗದೀಶ್, ಪಾಡಿಯಮ್ಮಂಡ ಮನು ಮಹೇಶ್, ಅರೆಯಡ ವಿಠಲ್ ಮೊಣ್ಣಪ್ಪ, ಕಂಗಾಂಡ ಜಾಲಿ ಪೂವಪ್ಪ, ಬಿ.ಎಂ. ಪ್ರತೀಪ, ತಿರೋಡಿರ ರಾಜ, ಚೀಯಕಪೂವಂಡ ಸುರಿ, ಮಣವಟ್ಟಿರ ಪೆÇನ್ನು ಪೆÇನ್ನಪ್ಪ, ಮಣವಟ್ಟಿರ ಡಿಕ್ಕ ಮುತ್ತಣ್ಣ, ಅಜ್ಜೆಟ್ಟಿರ ಬೋಪಣ್ಣ, ಅಪ್ಪನೆರವಂಡ ಕಿರಣ್, ಶಿವಚಾಳಿಯಂಡ ಕಿಶೋರ್, ಮಂಡೀರ ರಾಜಪ್ಪ, ಪೆÇೀರ್ಕುವಂಡ ಅನಿಲ್, ಬೊಟ್ಟೋಳಂಡ ರಮೇಶ್, ಎನ್.ಎಸ್. ಉದಯ ಶಂಕರ್, ಬೊಪ್ಪಂಡ ಡಾ. ಜಾಲಿ ಬೋಪಯ್ಯ, ಮತ್ತಿತರರು ಇದ್ದರು.