ಸೋಮವಾರಪೇಟೆ, ಜು. 2: ಇಲ್ಲಿನ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪ್ರಮುಖ ಸ್ಥಳಗಳಿಂದ ತ್ಯಾಜ್ಯಗಳನ್ನು ವಿಲೇವಾರಿ ಮಾಡಲು ಹೆಚ್ಚಿನ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪೌರ ಕಾರ್ಮಿಕರಿಗೆ ತಳ್ಳುವ ಗಾಡಿಗಳನ್ನು ವಿತರಿಸಲಾಯಿತು.ಸದ್ಯಕ್ಕೆ ನಾಲ್ಕು ಗಾಡಿಗಳನ್ನು ಪ.ಪಂ. ಖರೀದಿಸಿದ್ದು, ಒಣ ಹಾಗೂ ಹಸಿ ಕಸಗಳನ್ನು ವಿಂಗಡಿಸಿ ಸಂಗ್ರಹಿಸಲಾಗುವದು. ಸಾರ್ವಜನಿಕ ಪ್ರದೇಶಗಳಲ್ಲಿ ಯಾರೂ ಸಹ ತ್ಯಾಜ್ಯಗಳನ್ನು ಹಾಕದೇ ಪಟ್ಟಣದ ಸ್ವಚ್ಛತೆಗೆ ಸಹಕಾರ ನೀಡಬೇಕೆಂದು ಪ.ಪಂ. ಅಧ್ಯಕ್ಷೆ ವಿಜಯಲಕ್ಷ್ಮೀ ಸುರೇಶ್ ಮನವಿ ಮಾಡಿದರು.

ಈ ಸಂದರ್ಭ ಪ.ಪಂ. ಉಪಾಧ್ಯಕ್ಷ ರಮೇಶ್ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಸುಷ್ಮಾ ಸುಧಾಕರ್, ಮುಖ್ಯಾಧಿಕಾರಿ ನಾಚಪ್ಪ ಸೇರಿದಂತೆ ಸದಸ್ಯರುಗಳು, ಆರೋಗ್ಯ ನಿರೀಕ್ಷಕ ಉದಯಕುಮಾರ್ ಉಪಸ್ಥಿತರಿದ್ದರು.