ಗೋಣಿಕೊಪ್ಪಲು, ಜು. 4: ಪೊನ್ನಂಪೇಟೆಯ ಹಿರಿಯ ಛಾಯಾಗ್ರಾಹಕ ಎಸ್.ಎಲ್. ಶಿವಣ್ಣ ಅವರನ್ನು ಇತ್ತೀಚೆಗೆ ಕರ್ನಾಟಕ ಛಾಯಾಚಿತ್ರ ಗ್ರಾಹಕರ ಸಂಘದಿಂದ ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಬೆಂಗಳೂರು ನೀಲಕಂಠ ಕನ್ವೆಂಷನ್ ಸೆಂಟರ್ ಹಾಲ್‍ನಲ್ಲಿ ನಡೆದ ದಕ್ಷಿಣ ವಲಯ ಡಿಜಿ ಇಮೇಜ್ ವಸ್ತು ಪ್ರÀದರ್ಶನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

40 ವರ್ಷಗಳಿಂದ ಛಾಯಾಗ್ರಾಹ ಕರಾಗಿ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ಇವರನ್ನು ಕೊಡಗು ಜಿಲ್ಲೆಯಿಂದ ಆಯ್ಕೆ ಮಾಡಲಾಗಿತ್ತು. ಮೈಸೂರು ರಾಜವಂಶದ ಯದುವೀರ ಕೃಷ್ಣ ದತ್ತ ಚಾಮರಾಜ ಒಡೆಯರ್ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭ ಛಾಯಾಚಿತ್ರ ಗ್ರಾಹಕರ ಸಂಘದ ರಾಜ್ಯಾಧ್ಯಕ್ಷ ಶಶಿಧರ್, ಕಾರ್ಯದರ್ಶಿ ಪರಮೇಶ್, ಉಪಾಧ್ಯಕ್ಷ ನಾಗೇಶ್, ಕೊಡಗು ಜಿಲ್ಲಾಧ್ಯಕ್ಷ ವಿಶ್ವಕುಮಾರ್, ಕಾರ್ಯದರ್ಶಿ ಸುನಿಲ್, ತಾಲೂಕು ಅಧ್ಯಕ್ಷ ಶಿವಕುಮಾರ್ ಉಪಸ್ಥಿತರಿದ್ದರು.