ಮಡಿಕೇರಿ, ಜು. 5: ಪ್ರಜಾಸತ್ಯ ದಿನಪತ್ರಿಕೆ ವತಿಯಿಂದ ಪೌರಾ ಕಾರ್ಮಿಕರಿಗೆ ಹೈಪಟೈಟೀಸ್ ಬಿ ಚುಚ್ಚ್ಚುಮದ್ದು ನೀಡುವ ಕಾರ್ಯಕ್ರಮ ತಾ. 7 ರಂದು ಬೆಳಿಗ್ಗೆ 10.15 ಗಂಟೆಗೆ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದೆ.

ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಉದ್ಘಾಟಿಸುವರು. ಪತ್ರಿಕೆ ಸಂಪಾದಕ ಡಾ.ಬಿ.ಸಿ. ನವೀನ್‍ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ನಗರ ಸಭಾಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಉಪಾಧ್ಯಕ್ಷ ಟಿ.ಎಸ್. ಪ್ರಕಾಶ್, ಆರೋಗ್ಯಾಧಿಕಾರಿ ಡಾ. ಒ.ಆರ್. ರಂಗಪ್ಪ, ಕೊಡಗು ಇನ್ಸಿಟಿಟ್ಯೂಟ್ ಆಫ್ ಮೆಡಿಕಲ್ಸ್ ಸೈನ್ಸ್ ಪ್ರಾಂಶುಪಾಲ ಡಾ. ಕಾರ್ಯಪ್ಪ, ಜಿಲ್ಲಾಸ್ಪತ್ರೆ ಮುಖ್ಯ ಶಸ್ತ್ರ ಚಿಕಿತ್ಸಕ ಡಾ. ಅಬ್ದುಲ್ ಅಜೀಜ್ ಉಪಸ್ಥಿತರಿರುವರು.