ಸುಂಟಿಕೊಪ್ಪ, ಜು. 5: ಸುಂಟಿಕೊಪ್ಪ ಚಾಮುಂಡೇಶ್ವರಿ ದೇವಾಲಯದ ರಸ್ತೆಯಲ್ಲಿರುವ ಜ್ಞಾನಧಾರ ಶಿಶುವಿಹಾರ ಶಾಲಾ ಪ್ರಾರಂಭೋತ್ಸವವನ್ನು ಪುಟಾಣಿ ಮಕ್ಕಳಿಗೆ ಅಕ್ಷರ ಅಭ್ಯಾಸ ಮಾಡಿಸುವದರ ಮೂಲಕ ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಪಿ. ಸೋಮಚಂದ್ರ ಚಾಲನೆ ನೀಡಿ ಮಾತನಾಡಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹಿರಿಯ ಮುತ್ಸದ್ಧಿ ವೈ.ಎಂ. ಕರುಂಬಯ್ಯ ಅವರು, ವಿದ್ಯಾವಂತ ಈ ಸಮಾಜದಲ್ಲಿ ದೈರ್ಯದಿಂದ ಎಲ್ಲವನ್ನು ಎದುರಿಸಬಲ್ಲ ಎಂದರು. ಜಿ.ಪಂ. ಸದಸ್ಯೆ ಕೆ.ಪಿ. ಚಂದ್ರಕಲಾ, ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಬಿ. ಭಾರತೀಶ್ ಮಾತನಾಡಿದರು.

ಸಭಾ-ಸಮಾರಂಭದ ಅದ್ಯಕ್ಷತೆಯನ್ನು ಮಹಿಳಾ ಸಮಾಜದ ಅಧ್ಯಕ್ಷೆ ಲೀಲಾ ಮೇದಪ್ಪ ವಹಿಸಿದ್ದರು. ವೇದಿಕೆಯಲ್ಲಿ ಸುಂಟಿಕೊಪ್ಪ ತಾಲೂಕು ಪಂಚಾಯಿತಿ ಸದಸ್ಯೆ ಓಡಿಯಪ್ಪನ ವಿಮಲಾವತಿ, ಗ್ರಾ.ಪಂ. ಅಧ್ಯಕ್ಷೆ ರೋಸ್‍ಮೇರಿ ರಾಡ್ರಿಗಸ್, ಉಪಾಧ್ಯಕ್ಷ ಪಿ.ಆರ್. ಸುಕುಮಾರ್, ಸದಸ್ಯೆ ಗಿರಿಜಾ ಉದಯಕುಮಾರ್, ಬಿಜೆಪಿ ನಗರಾಧ್ಯಕ್ಷ ಪಿ.ಆರ್. ಸುನಿಲ್ ಕುಮಾರ್ ಇತರರು ಇದ್ದರು.