ಕೂಡಿಗೆ, ಜು. 6: ಸುಪ್ರೀಂ ಕೋರ್ಟ್‍ನ ಆದೇಶದಂತೆ ರಾಜ್ಯ ಹೆದ್ದಾರಿಯಲ್ಲಿರುವ ಮದ್ಯ ದಂಗಡಿಗಳಲ್ಲಿ ಮದ್ಯ ಮಾರಾಟ ಮಾಡುವದನ್ನು ರದ್ದುಪಡಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಹೆದ್ದಾರಿ ಯಲ್ಲಿರುವ ಮದ್ಯದಂಗಡಿಗಳು ಬಂದ್ ಆಗಿವೆ. ಮದ್ಯ ಪ್ರಿಯರು ಮದ್ಯಕ್ಕಾಗಿ ಪರದಾಡುವ ಪ್ರಸಂಗ ಎದುರಾಗಿದ್ದು, ಇದನ್ನು ಬಂಡವಾಳವನ್ನಾಗಿಸಿದ ಕೆಲವರು ಅಕ್ರಮವಾಗಿ ಮದ್ಯ ಮಾರಾಟ ಮಾಡಲು ಪ್ರಾರಂಭಿಸಿದ್ದಾರೆ. ನಾಲ್ಕನೇ ಪುಟಕ್ಕೆಹೆದ್ದಾರಿಯಲ್ಲಿ ಮದ್ಯ ಮಾರಾಟ ಸಮೀಪದ ಶಿರಂಗಾಲದಲ್ಲಿ ಇಬ್ಬರು ವ್ಯಕ್ತಿಗಳು ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಕುಶಾಲನಗರ ಗ್ರಾಮಾಂತರ ಪೊಲೀಸರು ಮದ್ಯ ಮಾರಾಟ ಮಾಡುತ್ತಿದ್ದ ಶಿವಣ್ಣ ಮತ್ತು ಶಿವಣ್ಣೇಗೌಡ ಎಂಬವರನ್ನು ಬಂಧಿಸಿ, ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಮದ್ಯವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಜೆ.ಇ. ಮಹೇಶ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.