ಸೋಮವಾರಪೇಟೆ, ಜು.5 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ “ನಮ್ಮೂರು ನಮ್ಮ ಕೆರೆ” ಕಾರ್ಯಕ್ರಮದಡಿಯಲ್ಲಿ ಗೋಣಿಮರೂರಿನಲ್ಲಿ ಪುನಶ್ಚೇತನಗೊಂಡಿರುವ ಬಪ್ಪನಕಟ್ಟೆ ಕೆರೆ ಲೋಕಾರ್ಪಣೆ ಹಾಗೂ ಸ್ವ-ಉದ್ಯೋಗ ವಿಚಾರ ಸಂಕಿರಣ ಕಾರ್ಯಕ್ರಮ ತಾ. 7ರಂದು ನಡೆಯಲಿದೆ.
ಶ್ರೀ.ಕ್ಷೇ.ಧ.ಗ್ರಾ. ಯೋಜನೆಯ ನೇತೃತ್ವದಲ್ಲಿ ಗೋಣಿಮರೂರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಕೆರೆ ಪುನಶ್ಚೇತನಾ ಸಮಿತಿ, ಬಸವೇಶ್ವರ ದೇವಸ್ಥಾನ ಸಮಿತಿ ಹಾಗೂ ಗಣಗೂರು ಗ್ರಾಮ ಪಂಚಾಯಿತಿ ಇವರುಗಳ ಸಹಭಾಗಿತ್ವದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅಂದು ಬೆಳಗ್ಗೆ 10 ಗಂಟೆಗೆ ಕೆರೆ ಲೋಕಾರ್ಪಣೆ ಕಾರ್ಯ ನಡೆಯಲಿದೆ.
ನಂತರ 11 ಗಂಟೆಗೆ ಬಸವೇಶ್ವರ ದೇವಸ್ಥಾನದ ಸಭಾ ಭವನದಲ್ಲಿ ನಡೆಯಲಿರುವ ಸ್ವ-ಉದ್ಯೋಗ ವಿಚಾರ ಸಂಕಿರಣವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್ ಉದ್ಘಾಟಿಸಲಿದ್ದಾರೆ.