ಕೂಡಿಗೆ, ಜು. 8: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನತ್ತೂರು ಗ್ರಾಮಗಳಿಗೆ ವಿಸ್ತಾರಕರಾಗಿ ತಾಲೂಕು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ಪ ಮತ್ತು ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಕಾಳನರವಿ ಮತ್ತು ಪಕ್ಷದ ಕಾರ್ಯಕರ್ತರು ಮನೆ ಮನೆಗೆ ತೆರಳಿ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭ ಕಾಳನರವಿ ಮಾತನಾಡಿ, ಕೇಂದ್ರ ಸರ್ಕಾರವು ಗ್ರಾಮೀಣ ಮಟ್ಟದ ಜನರಿಗೆ ಅನುಕೂಲವಾಗುವ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಇವುಗಳನ್ನು ಫಲಾನುಭವಿಗಳು ಅರಿತು ತಮಗೆ ಸಿಗುವಂತಹ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಗ್ರಾಮಸ್ಥರಿಗೆ ತಿಳಿಸಿದರು.

ಇದೇ ವೇಳೆ ಹೊಸಗಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಲು ಅರ್ಜಿ ವಿತರಿಸಿ, ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಹೊಸದಾಗಿ ಸದಸ್ಯರನ್ನು ಸೇರ್ಪಡೆ ಮಾಡಲಾಯಿತು.

ಈ ಸಂದರ್ಭ ಕೂಡುಮಂಗಳೂರು ಬಿಜೆಪಿ ಬ್ಲಾಕ್ ಅಧ್ಯಕ್ಷ ಮಂಜುನಾಥ್ ಗುರುಲಿಂಗಪ್ಪ, ತಾಲೂಕು ಬಿಜೆಪಿ ಉಪಾಧ್ಯಕ್ಷ ಕೆ.ಕೆ.ಭೋಗಪ್ಪ, ಆರ್‍ಎಂಸಿ ಮಾಜಿ ಅಧ್ಯಕ್ಷ ಎಂ.ಬಿ.ಜಯಂತ್, ತಾಲೂಕು ಪಂಚಾಯಿತಿ ಸದಸ್ಯ ಗಣೇಶ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಸಾವಿತ್ರಿ ರಾಜನ್, ಜ್ಯೋತಿಪ್ರಮೀಳ, ಬಿಜೆಪಿ ಮಹಿಳಾ ಘಟಕದ ಮುಖ್ಯಸ್ಥರುಗಳಾದ ಕೆ. ಕನಕ, ಇಂದಿರಾ ರಮೇಶ್, ನಿರ್ಮಲ, ಆಶಾ ಅಣ್ಣಪ್ಪ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಇದ್ದರು.