ಚೆಟ್ಟಳ್ಳಿ, ಜು. 10: ಚೆಟ್ಟಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಇತ್ತೀಚೆಗೆ ಆರೋಗ್ಯ ಕೇಂದ್ರದಿಂದ ಪಟ್ಟಣದವರೆಗೆ ಡೆಂಗ್ಯೂ ಮತ್ತು ಮಲೇರಿಯಾ ಮಾಸಾಚರಣೆಯ ಜಾಥಾವನ್ನು ನಡೆಸಲಾಯಿತು.

ಜಾಥಾವನ್ನು ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ. ಯಶೋದ ಹಾಗೂ ಸ್ತ್ರೀ ಶಕ್ತಿ ಸಂಘದ ಅಧ್ಯಕ್ಷೆ ಹಾಗೂ ಪಂಚಾಯಿತಿ ಸದಸ್ಯೆ ಮೇರಿ ಅಂಬುದಾಸ್ ಉದ್ಘಾಟಿಸಿದರು. ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಸ್ಥಳೀಯ ಸ್ರೀ ಶಕ್ತಿ ಸಂಘದವರು ಡೆಂಗ್ಯೂ ಮತ್ತು ಮಲೇರಿಯಾ ಬಗ್ಗೆ ಜಾಗೃತಿ ಮೂಡಿಸುವ ಘೋಷವಾಕ್ಯದೊಂದಿಗೆ ಪಟ್ಟಣದಲ್ಲಿ ತೆರಳಿ ಮಾನವ ಸರಪಳಿಯನ್ನು ನಿರ್ಮಿಸಿದರು.

ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳಾದ ಮಂಜುನಾಥ್, ಆನಂದ್, ಆರೋಗ್ಯ ನಿರೀಕ್ಷಕ ದೇವರಾಜ್ ಹಾಜರಿದ್ದರು.