ಸುಂಟಿಕೊಪ್ಪ, ಜು.9: ಮಂಗಳೂರಿನ ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮಡಿವಾಳ ಅವರ ಹತ್ಯೆಯನ್ನು ಖಂಡಿಸಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಕನ್ನಡ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಜಿಲ್ಲಾ ವಿಶ್ವಹಿಂದೂ ಪರಿಷತ್ ಕಾರ್ಯದರ್ಶಿ ಡಿ.ನರಸಿಂಹ ಮಾತನಾಡಿ ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ ಹಾಗೂ ಅಲ್ಪಸಂಖ್ಯಾತರ ಪರ ಮೃದು ಧೋರಣೆಯಿಂದ ಆರ್‍ಎಸ್‍ಎಸ್ ಕಾರ್ಯಕರ್ತರ ಕೊಲೆಯಾಗುತ್ತಿದೆ. ಸರಕಾರ ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳದಿದ್ದಲ್ಲಿ ಉಗ್ರ ಪತಿಭಟನೆ ನಡೆಸಲಾಗುವದೆಂದರು

ಈ ಪ್ರತಿಭಟನೆಯಲ್ಲಿ ನಗರ ವಿಶ್ವಹಿಂದೂ ಪರಿಷತ್ ಅಧ್ಯಕ್ಷ ಎ. ಶ್ರೀಧರ್ ಕುಮಾರ್, ಕಾರ್ಯದರ್ಶಿ ಬಿ.ಕೆ.ಪ್ರಶಾಂತ್ (ಕೊಕಾ), ನಗರ ಬಿಜೆಪಿ ಅಧ್ಯಕ್ಷ ಪಿ.ಆರ್. ಸುನಿಲ್ ಕುಮಾರ್ ರಮೇಶ್ ಪಿಳ್ಳೆ, ಕಾರ್ಯಕರ್ತರು ಇದ್ದರು.