ಮಡಿಕೇರಿ, ಜು. 10 : ಕೊಡಗು ಕಾಂಗ್ರೆಸ್ ನೂತನ ಜಿಲ್ಲಾಧ್ಯಕ್ಷ ಶಿವುಮಾದಪ್ಪ ಅವರು ಇಂದು ಜಿಲ್ಲಾ ಕೇಂದ್ರ ಮಡಿಕೇರಿಗೆ ಆಗಮಿಸಿದ್ದರು. ನಗರ ಕಾಂಗ್ರೆಸ್ ವತಿಯಿಂದ ಅವರನ್ನು ಆತ್ಮೀಯವಾಗಿ ಬರ ಮಾಡಿಕೊಳ್ಳಲಾಯಿತು.ನಗರದ ಜ.ತಿಮ್ಮಯ್ಯ ವೃತ್ತದ ಬಳಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು, ಕಾಂಗ್ರೆಸ್ ಹಾಗೂ ಶಿವುಮಾದಪ್ಪ ಪರ ಘೋಷಣೆಗಳನ್ನು ಕೂಗಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.ಈ ಸಂದರ್ಭ ಮಾತನಾಡಿದ ಶಿವು ಮಾದಪ್ಪ, ಎಲ್ಲಾ ಜನರ ಸಹಕಾರದೊಂದಿಗೆ ಪ್ರತಿಯೊಬ್ಬರ ವಿಶ್ವಾಸ ಪಡೆದು ಪಕ್ಷ ಸಂಘಟನೆ ಮಾಡುವ ಮೂಲಕ ಮುಂದಿನ ವಿಧಾನಸಭಾ ಚುನಾವಣೆಗೆ ಸಿದ್ಧತೆ ಮಾಡಲಾಗುವದು ಎಂದು ತಿಳಿಸಿದರು. ಇದೇ ಸಂದರ್ಭ ನಗರದ ಸಂತ ಮೈಕಲರ ದೇವಾಲಯಕ್ಕೆ ತೆರಳಿದ ಜಿಲ್ಲಾಧ್ಯಕ್ಷರು ಮೇಣದ ಬತ್ತಿ ಹಚ್ಚಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಕಾಂಗ್ರೆಸ್ ನಗರಾಧ್ಯಕ್ಷ ಅಬ್ದುಲ್ ರಜಾಕ್, ನಗರಸಭಾಧ್ಯಕ್ಷೆ ಕಾವೇರಮ್ಮ ಸೋಮಣ್ಣ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚುಮ್ಮಿದೇವಯ್ಯ, ನಗರಸಭಾ ಸದಸ್ಯರಾದ ಪ್ರಕಾಶ್ ಆಚಾರ್ಯ, ಜುಲೇಕಾಬಿ, ತಜುಸಂ, ಉದಯಕುಮಾರ್ ಪ್ರಮುಖರಾದ ತೆನ್ನೀರಾ ಮೈನಾ ಮತ್ತಿತರರು ಹಾಜರಿದ್ದರು.