ಕುಶಾಲನಗರ, ಜು. 11: ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನವೊಂದು ಡಿಕ್ಕಿಯಾದ ಪರಿಣಾಮ ಓರ್ವ ಮೃತಪಟ್ಟು ಇಬ್ಬರು ಆಸ್ಪತ್ರೆಗೆ ದಾಖಲಾದ ಘಟನೆ ಸಮೀಪದ ಆವರ್ತಿ ಬಳಿ ನಡೆದಿದೆ.

ಸುಂಕದಹಳ್ಳಿ ನಿವಾಸಿ ಆನಂದ (45) ಮೃತ ದುರ್ದೈವಿ. ಅಪಘಾತದಲ್ಲಿ ಗಾಯಗೊಂಡ ರವಿ ಹಾಗೂ ಆಂಜನೇಯ ಎಂಬವರನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ರಾತ್ರಿ ಕೆಲಸ ಮುಗಿಸಿ ದ್ವಿಚಕ್ರ ವಾಹನದಲ್ಲಿ ಮೂವರು ತೆರಳುತ್ತಿದ್ದ ಸಂದರ್ಭ ಆವರ್ತಿ ಗ್ರಾಮದ ಬಳಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಘಟನೆ ಸಂಭವಿಸಿದೆ. ಬೈಲುಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.