ಮಡಿಕೇರಿ, ಜು. 12 : ಸಿದ್ದಾಪುರ, ಚೆಟ್ಟಳ್ಳಿ, ಮಡಿಕೇರಿ ಮಾರ್ಗವಾಗಿ ಮಂಗಳೂರಿಗೆ ತೆರಳುವ ನೂತನ ಕೆಎಸ್‍ಆರ್‍ಟಿಸಿ ಬಸ್ ಮಾರ್ಗಕ್ಕೆ ತಾ. 14 ರಂದು ಚಾಲನೆ ನೀಡಲಾಗುವದೆಂದು ಕೆಎಸ್‍ಆರ್‍ಟಿಸಿ ನಿರ್ದೇಶಕÀ ಎಂ.ಎ. ಶೌಕತ್ ಆಲಿ ತಿಳಿಸಿದ್ದಾರೆ.

ಪ್ರತಿದಿನ ಬೆಳಗ್ಗೆ 6.30 ಕ್ಕೆ ಸಿದ್ದಾಪುರ ಬಸ್ ನಿಲ್ದಾಣದಿಂದ ಹೊರಡುವ ಬಸ್ 11.30ಕ್ಕೆ ಮಂಗಳೂರು ತಲುಪಲಿದೆ. ಮಧ್ಯಾಹ್ನ 12.45ಕ್ಕೆ ಮಂಗಳೂರಿನಿಂದ ಹೊರಟು ರಾತ್ರಿ 7 ಗಂಟೆಗೆ ಸಿದ್ದಾಪುರ ತಲುಪಲಿದೆ. ಶುಕ್ರವಾರ ಬೆಳಗ್ಗೆ ಬಸ್‍ಗೆ ಚಾಲನೆ ನೀಡಲಾಗುತ್ತಿದ್ದು, ತಾವು ಸೇರಿದಂತೆ ರೇಷ್ಮೆ ಮಾರಾಟ ಮಂಡಳಿಯ ಅಧ್ಯಕ್ಷರಾದ ಟಿ.ಪಿ.ರಮೇಶ್, ಸ್ಥಳೀಯ ಜಿ.ಪಂ, ತಾ.ಪಂ, ಗ್ರಾ.ಪಂ ಪ್ರತಿನಿಧಿಗಳು ಹಾಗೂ ಪ್ರಮುಖರು ಹಾಜರಿರುವರು ಎಂದು ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ.