ಮಡಿಕೇರಿ, ಜು. 13: ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಾಜಿರಾವ್ ಪಾಟೀಲ್ ಖಾಡೆ ತಾ. 15 ರಂದು ಜಿಲ್ಲೆಗೆ ಭೇಟಿ ನೀಡಿ ಗ್ರಾಮ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಂಘಟನೆಯ ಜಿಲ್ಲಾ ಸಂಯೋಜಕ ತೆನ್ನಿರಾ ಮೈನಾ ತಿಳಿಸಿದ್ದಾರೆ.

ಸಂಘಟನೆಯ ರಾಜ್ಯಾಧ್ಯಕ್ಷ ಬಿ.ಎಂ. ಸಂದೇಶ್, ರಾಜ್ಯ ವಲಯ ಸಂಯೋಜಕ ಎಂ. ರಂಗಸ್ವಾಮಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವು ಮಾದಪ್ಪ, ರೇಷ್ಮೆ ಮಾರುಕಟ್ಟೆ ನಿಗಮದ ಅಧ್ಯಕ್ಷ ಟಿ.ಪಿ. ರಮೇಶ್, ಅರೆಭಾಷೆ ಅಕಾಡೆÀಮಿ ಅಧ್ಯಕ್ಷ ಕೊಲ್ಯದ ಗಿರೀಶ್, ಐಎನ್‍ಟಿಯುಸಿ ರಾಜ್ಯ ಉಪಾಧ್ಯಕ್ಷÀ ನಾಪಂಡ ಮುತ್ತಪ್ಪ ಸೇರಿದಂತೆ ಕಾಂಗ್ರೆಸ್ ಮುಖಂಡರು, ಜನಪ್ರತಿನಿಧಿಗಳು, ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತಾ. 15 ರಂದು ಬೆಳಿಗ್ಗೆ 11 ಗಂಟೆಗೆ ಮೂರ್ನಾಡು, ಅಪರಾಹ್ನ 3 ಗಂಟೆಗೆ ಹೊದ್ದೂರು, 17 ರಂದು ಬೆಳಿಗ್ಗೆ 11 ಗಂಟೆಗೆ ಭಾಗಮಂಡಲದಲ್ಲಿ ಗ್ರಾಮ ಸಂವಾದ ಕಾರ್ಯಕ್ರಮ ನಡೆಯಲಿದೆ.