ಮಡಿಕೇರಿ, ಜು. 21: ಮಡಿಕೇರಿ ನಗರ ದಸರಾ ದಶಮಂಟಪ ಸಮಿತಿ ಸಭೆ ಇಂದು ನಗರದ ಕಾವೇರಿ ಕಲಾ ಕ್ಷೇತ್ರದಲ್ಲಿ ನಡೆಯಿತು.ದಶಮಂಟಪ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪೇಟೆ ಶ್ರೀ ರಾಮಮಂದಿರದ ಸತೀಶ್ ಧರ್ಮಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭ ಮಾತನಾಡಿದ ಅವರು ಧಾರ್ಮಿಕತೆಯೊಂದಿಗೆ ಸಾಂಸ್ಕøತಿಕವಾಗಿ ಹಬ್ಬ ಆಚರಿಸಿದಾಗ ಅರ್ಥಪೂರ್ಣವಾಗಿರುತ್ತದೆ. ಆದರೆ ಇಂದು ಮನೋರಂಜನೆಗೆ ಹೆಚ್ಚಿನ ಆದ್ಯತೆ ನೀಡುವದು ಕಂಡು ಬರುತ್ತಿದೆ ಎಂದು ವಿಷಾದಿಸಿದರು.

ಹಿಂದಿನ ಸಾಲಿನ ಕಾರ್ಯಾಧ್ಯಕ್ಷ ಮಹೇಶ್ ಜೈನಿ ಮಾತನಾಡಿದರು. ಈ ಸಂದರ್ಭ ದಶಮಂಟಪ ಸಮಿತಿಗಳ ಅಧ್ಯಕ್ಷರು ಪದಾಧಿಕಾರಿಗಳು ಇದ್ದರು. ಬೈಲಾ ತಿದ್ದುಪಡಿ ಸಭೆಯ ಬಳಿಕ ಮುಂದಿನ ಸಭೆ ನಡೆಸುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು. ಈ ಸಂದರ್ಭ ನಗರಸಭಾ ಉಪಾಧ್ಯಕ್ಷ ಟಿ.ಎಸ್. ಪ್ರಕಾಶ್, ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್. ರಮೇಶ್ ಹಾಗೂ ಇನ್ನಿತರರು ಇದ್ದರು.