ಸುಂಟಿಕೊಪ್ಪ, ಜು. 21: ಪತ್ರಿಕಾರಂಗ ಪ್ರಬಲವಾಗಿ ಬೆಳೆದಿರುವದರಿಂದಲೇ ಭಾರತದ ಪ್ರಜಾಪ್ರಭುತ್ವ ಬೇರು ಗಟ್ಟಿಯಾಗಲು ಕಾರಣವಾಗಿದೆ ಎಂದು ಹಾಸನ ಜಿಲ್ಲಾ ಗ್ರಾಹಕರ ವ್ಯಾಜ್ಯ ನ್ಯಾಯಾಲಯದ ಅಧ್ಯಕ್ಷ ಎ.ಲೋಕೇಶ್ ಕುಮಾರ್ ಅಭಿಮತ ವ್ಯಕ್ತಪಡಿಸಿದರು.ಸೋಮವಾರಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಸುಂಟಿಕೊಪ್ಪ ಹೋಬಳಿ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಟ್ಟಡದಲ್ಲಿರುವ ಗುಂಡುಗುಟ್ಟಿ ಮಂಜುನಾಥಯ್ಯ ಸಹಕಾರ ಭವನದಲ್ಲಿ ನಡೆದ ಪತ್ರಿಕಾ ದಿನಾಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಪತ್ರಕರ್ತರು ವೃತ್ತಿನಿಷ್ಠರಾಗಿ ಸಮಾಜ ಮುಖಿ ಕೆಲಸ ಮಾಡುತ್ತಿದ್ದಾರೆ ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿ.ಪಂ.ಸದಸ್ಯೆ ಕೆ.ಪಿ. ಚಂದ್ರಕಲಾ, ಪತ್ರಕರ್ತರಿಗೆ ಪಕ್ಷ ಇಲ್ಲ. ಆದರೆ ರಾಜಕಾರಣಿಗಳು ಪತ್ರಕರ್ತರನ್ನು ಹಾಳು ಮಾಡುತ್ತಿದ್ದಾರೆ. ಎಲೆ ಮರೆಯ ಕಾಯಿಯಂತೆ ಸಮಾಜವನ್ನು ತಿದ್ದಿ ಆರೋಗ್ಯಕರ ಸಮಾಜಕ್ಕೆ ಪ್ರಯತ್ನಿಸುತ್ತಿರುವ ಕೊಡಗಿನ ಆನೇಕ ಪತ್ರಕರ್ತರು ಬಡವರಿದ್ದಾರೆ. ಅವರಿಗೆ ಸೋಮವಾರಪೇಟೆ ತಾಲೂಕು ವ್ಯಾಪ್ತಿಯಲ್ಲಿ 30x40 ಅಗಲದ ನಿವೇಶನ ದೊರಕಿಸಿಕೊಡಲು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಅದನ್ನು ಒದಗಿಸಿಕೊಡಲು ಪ್ರಯತ್ನಿಸುವದಾಗಿ ಭರವಸೆ ನೀಡಿದರು.

ಜಿ.ಪಂ.ಸದಸ್ಯೆ ಕುಮುದಾ ಧರ್ಮಪ್ಪ ಮಾತನಾಡಿ, ಸಮಾಜವನ್ನು ಸರಿದಾರಿಗೆ ತರುವ ಪ್ರರ್ತಕರ್ತರ ಸೇವೆ ಕಠಿಣವಾದುದು. ಎಷ್ಟೋ ಪತ್ರಕರ್ತರು ಬಡವರಿದ್ದಾರೆ. ಅವರಿಗೆ ಸರಕಾರದ ಸೌಲಭ್ಯ ಸಿಗುವಂತಾಬೇಕು ಎಂದರು.

ಪ್ರೆಸ್ ಕ್ಲಬ್ ಅಧ್ಯಕ್ಷ ಎ.ಆರ್. ಕುಟ್ಟಪ್ಪ ಮಾತನಾಡಿ, ಕೊಡಗಿನ ಪತ್ರಕರ್ತರಿಗೆ ನಿವೇಶನ ನೀಡುವಂತೆ ಜಿಲ್ಲಾಡಳಿತದೊಂದಿಗೆ ಜನಪ್ರತಿನಿಧಿಗಳೊಂದಿಗೆ 15 ವರ್ಷದಿಂದ ಪ್ರಯತ್ನಿಸುತ್ತಿದ್ದರೂ ಸಾಧ್ಯವಾಗಲಿಲ್ಲ. ಅವರಿಗೆ ಕೊಡುವ ಮನಸ್ಸಿಲ್ಲ. ಕನಿಷ್ಟ ಸುಂಟಿಕೊಪ್ಪ ಪ್ರರ್ತಕರ್ತರ ಸಂಘದ ಕಚೇರಿಗೆ ನಿವೇಶನ ಜಾಗ ಜನಪ್ರತಿನಿಧಿಗಳು ಒದಗಿಸಿಕೊಡಲಿ ಎಂದರು.

ಮುಖ್ಯ ಅತಿಥಿಗಳಾಗಿ ತಾ. ಪಂ. ಸದಸ್ಯ ಬಲ್ಲ್ಲಾರಂಡ ಮಣಿ ಉತ್ತಪ್ಪ ಮಾತನಾಡಿ, ಪತ್ರಕರ್ತರಿಗೆ ಕಡಿವಾಣ ಹಾಕುವ ಕೆಲಸ ಯಾರು ಮಾಡಬಾರದು ಜನಪ್ರತಿನಿಧಿಗಳು ತಮ್ಮ ಅವಧಿಯಲ್ಲಿ ಜನರ ಆಗು ಹೋಗುಗಳಿಗೆ ಸ್ಪಂದಿಸಬೇಕಾಗುತ್ತದೆ ತಾನು ಜಿ.ಪಂ.ಸದಸ್ಯನಾಗಿದ್ದಾಗ ವಾಲ್ನೂರು ತ್ಯಾಗತ್ತೂರು ವಿಭಾಗದ 500 ಕುಟುಂಬದವರಿಗೆ ರಸ್ತೆ ನಿರ್ಮಿಸಿ ಕೊಡುವಾಗ ಅನೇಕ ಅಡೆತಡೆಗಳು ಬಂದರೂ ಪತ್ರಿಕಾ ಮಿತ್ರರ ಸಹಕಾರದಿಂದ ರಸ್ತೆ ನಿರ್ಮಿಸಿಕೊಡಲು ಸಾಧ್ಯವಾಯಿತು ಎಂದರು.

ಸಾಧಕರಿಗೆ ಸನ್ಮಾನ: ಕೊಡಗರಹಳ್ಳಿಯ ಸುಂಟಿಕೊಪ್ಪ ನಾಡು ಪ್ರೌಢಶಾಲೆಯಲ್ಲಿ ಕಳೆದ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮ ಶಾಲಾ ವಿಭಾಗದಲ್ಲಿ ಅತ್ಯಧಿಕ ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಬಿ. ನವ್ಯ ಹಾಗೂ ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅತ್ಯಧಿಕ ಅಂಕವನ್ನು ಪಡೆದಿದ ಪಿ.ಎಸ್. ಆನ್‍ಲೀಶ, ಪತ್ರಿಕಾ ಕ್ಷೇತ್ರ ಹಾಗೂ ಛಾಯಾಗ್ರಾಹಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿಘ್ನೇಶ್ ಭೂತನಕಾಡು ಜಿಲ್ಲಾ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ಚಂದ್ರಮೋಹನ್, ಹಿರಿಕರ ರವಿ ಅವರನ್ನು ಸನ್ಮಾನಿಸಲಾಯಿತು.

ತಾಲೂಕು ಪತ್ರಕರ್ತರ ಸಂಘದಿಂದ ಕೊಡ ಮಾಡುವ ಪ್ರಶಸ್ತಿಗೆ ಭಾಜನರಾದ ಕುಶಾಲನಗರ ವರದಿಗಾರ ಚಂದ್ರಮೋಹನ್ (ಅರಣ್ಯ ಪರಿಸರ ವನ್ಯಜೀವಿ ವರದಿ), ದಿನೇಶ್ ಮಾಲಂಬಿ ( ಅತ್ಯುತ್ತಮ ಮಾನವೀಯ ವರದಿ), ಎಂ.ಬಿ. ವಿನ್ಸೆಂಟ್ ವಿನೋದ್ (ಕ್ರೀಡಾ ವರದಿ), ಬಿ.ಎ.ಭಾಸ್ಕರ

( ಅತ್ಯುತ್ತಮ ತನಿಖಾ ವರದಿ), ಕೆ.ಕೆ. ನಾಗರಾಜಶೆಟ್ಟಿ (ಗ್ರಾಮೀಣ ವರದಿ), ಇವರುಗಳನ್ನು ಸನ್ಮಾನಿಸಲಾಯಿತು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸುಂಟಿಕೊಪ್ಪ ಕಾಂiÀರ್iನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಬಿ. ವಿನ್ಸೆಂಟ್ ಮಾತನಾಡಿ. ಸಂಘದ ಕಚೇರಿಗೆ ನಿವೇಶನ ಹಾಗೂ ಪತ್ರಕರ್ತರಿಗೆ ಬಸ್ ಪಾಸ್, ಮಕ್ಕಳಿಗೆ ಉಚಿತ ಶಿಕ್ಷಣವನ್ನು ಕೊಡಿಸಲು ಶಿಫಾರಸ್ಸು ಮಾಡುವಂತೆ ಜನಪ್ರತಿನಿಧಿಗಳಲ್ಲಿ ಕೋರಿಕೆಯನ್ನು ಮುಂದಿಟ್ಟರು.

ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಹಾಗೂ ನೂತನ ಪ್ರೆಸ್‍ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಸೋಮವಾಪೇಟೆ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಕವನ್ ಕಾರ್ಯಪ್ಪ, ಹಿರಿಯ ಸಾಹಿತಿ ಹಾ.ತಿ. ಜಯಪ್ರಕಾಶ್, ಜಿಲ್ಲಾ ಕಸಾಪ ಅಧ್ಯಕ್ಷ ಲೋಕೇಶ್ ಸಾಗರ್ ಇದ್ದರು.

ಸುಂಟಿಕೊಪ್ಪ ಪತ್ರಕರ್ತರ ಸಂಘದ ಸದಸ್ಯ ಪಿ.ಎಫ್. ಸಬಾಸ್ಟೀನ್ ಸ್ವಾಗತಿಸಿ, ವಿಜಯಹಾನಗಲ್ ನಿರೂಪಿಸಿ, ತಾಲೂಕು ಕಾರ್ಯದರ್ಶಿ ಬಿ.ಎ.ಭಾಸ್ಕರ್ ವಂದಿಸಿದರು.