ಸುಂಟಿಕೊಪ್ಪ, ಜು. 22: ಕಳೆದ 15 ದಿನಗಳಿಂದ ಕಂಬಿಬಾಣೆ 7ನೇ ಹೊಸಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಕುಡಿಯುವ ನೀರು ಸರಬರಾಜು ಸಹ ಆಗುತ್ತಿಲ್ಲ ಕೂಡಲೇ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡಿ ಎಂದು ಗ್ರಾಮಸ್ಥರು ಸುಂಟಿಕೊಪ್ಪ ಸೆಸ್ಕ್ ಜೂನಿಯರ್ ಇಂಜಿನಿಯರ್ ರಮೇಶ್ ಅವರಿಗೆ ಮನವಿ ಸಲ್ಲಿಸಿದರು.ಮನವಿ ಸ್ವೀಕರಿಸಿ ಮಾತನಾಡಿದ ಇಂಜಿನಿಯರ್ ಲೈನ್ ಮೆನ್‍ಗಳ ಕೊರತೆಯಿಂದ ಸುಂಟಿಕೊಪ್ಪ ಹೋಬಳಿ ಮಟ್ಟದಲ್ಲಿ ಮಳೆಗಾಲದಲ್ಲಿ ಎಲ್ಲೆಡೆ ವಿದ್ಯುತ್ ಸರಬರಾಜು ಮಾಡಲು ಸಾಧ್ಯವಾಗಲಿಲ್ಲ 7ನೇ ಹೊಸಕೋಟೆ ಹಾಗೂ ಕಂಬಿಬಾಣೆ ಗ್ರಾಮಸ್ಥರಿಗೆ ವಿದ್ಯುತ್ ಕಲ್ಪಿಸಲು ಕೂಡಲೇ ಪ್ರಯತ್ನಿಸುತ್ತೇನೆ ಎಂದು ಹೇಳಿದರು.

ಈ ಸಂದರ್ಭ ಕಂಬಿಬಾಣೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಕೆ.ಕೃಷ್ಣ, ಮಾಜಿ ಅಧ್ಯಕ್ಷ ಡಾ.ಶಶಿಕಾಂತ ರೈ, ಹೊಸಕೋಟೆ ಗ್ರಾ.ಪಂ.ಸದಸ್ಯ ಅಬ್ದುಲ್‍ಕುಟ್ಟಿ, ಜೋಸೆಫ್ ಹಾಗೂ ಗ್ರಾಮಸ್ಥರು ಇದ್ದರು.