ಮಡಿಕೇರಿ, ಜು. 25: ನಗರದ ಹೈಟೆಕ್ ಮಾರುಕಟ್ಟೆ ಕಾಮಗಾರಿ ಅಪೂರ್ಣಗೊಂಡಿದ್ದು, ಈ ಬಗ್ಗೆ ಸಂಬಂಧಿಸಿದವರು ಕಾಳಜಿ ವಹಿಸಿ ಶೀಘ್ರವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲು ಕ್ರಮಕೈಗೊಳ್ಳದಿದ್ದರೆ ನಗರಸಭೆ ಎದುರು ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳುವದಾಗಿ ನಗರಸಭಾ ಸದಸ್ಯ ಪೀಟರ್ ಎಚ್ಚರಿಕೆಯಿತ್ತಿದ್ದಾರೆ.ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಜೂನ್ 23ರ ಒಳಗಾಗಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಗುತ್ತಿಗೆದಾರರಿಗೆ ಸೂಚನೆ ನೀಡಿದ್ದರಾದರೂ ಜುಲೈ 23 ಕಳೆದರೂ ಅದು

ಪೂರ್ಣವಾಗದ ಮಾರುಕಟ್ಟೆ ಕಾಮಗಾರಿ

(ಮೊದಲ ಪುಟದಿಂದ) ಕಾರ್ಯರೂಪಕ್ಕೆ ಬಂದಿಲ್ಲ. ಜಿಲ್ಲಾಧಿಕಾರಿಗಳ ಆದೇಶಕ್ಕೂ ಮನ್ನಣೆ ಸಿಗದಿರುವದು ಖೇದಕರ ಎಂದು ಅಭಿಪ್ರಾಯಪಟ್ಟಿರುವ ಪೀಟರ್, ನಗರಸಭಾ ಆಯುಕ್ತರಿಗೆ ಹೈಟೆಕ್ ಮಾರುಕಟ್ಟೆ ಕಾಮಗಾರಿ ಬಗ್ಗೆ ಆಸಕ್ತಿಯೇ ಇಲ್ಲ ಎಂದು ದೂರಿದ್ದಾರೆ. ಮಾರುಕಟ್ಟೆ ಕಾಮಗಾರಿ ಪೂರ್ಣಗೊಳಿಸುವ ಸಂಬಂಧ ಹಲವಾರು ಹೋರಾಟಗಳನ್ನು ಮಾಡಿದ್ದರೂ ಕೂಡ ಇದುವರೆಗೂ ಕಾಮಗಾರಿ ಪೂರ್ಣಗೊಳ್ಳದಿರುವದು ವಿಷಾದನೀಯ. ಈ ಭಾಗದ ಸದಸ್ಯನಾಗಿರುವ ತನಗೆ ಜನರ ಪ್ರಶ್ನೆಗಳಿಗೆ ಉತ್ತರ ನೀಡಲು ಕಷ್ಟವಾಗುತ್ತಿದ್ದು, ಕೂಡಲೇ ಸಂಬಂಧಿಸಿದವರು ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕು ಇಲ್ಲವಾದರೆ ಉಪವಾಸ ಸತ್ಯಾಗ್ರಹ ಕೈಗೊಳ್ಳುವದಾಗಿ ಪೀಟರ್ ತಿಳಿಸಿದ್ದಾರೆ.