ಸುಂಟಿಕೊಪ್ಪ, ಜು. 25: ಇಲ್ಲಿನ ಲಯನ್ಸ್ ಸಂಸ್ಥೆಯ ಪದಗ್ರಹಣ ಸಮಾರಂಭ ನಡೆಯಿತು. ಸುಂಟಿಕೊಪ್ಪ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಕಟ್ಟಡದಲ್ಲಿರುವ ಗುಂಡುಗುಟ್ಟಿ ಮಂಜುನಾಥಯ್ಯ ಸಹಕಾರ ಭವನದಲ್ಲಿ ಆಯೋಜಿಸಲಾಗಿದ್ದÀ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಲಯನ್ಸ್ ಎಂ.ಜೆ.ಎಫ್.ಕುಡುಪಿ ಅರವಿಂದ ಶೆಣೈ ನೂತನ ಆಡಳಿತ ಮಂಡಳಿಯ ಅಧ್ಯಕ್ಷ ರಕ್ಷಿತ್, ಕಾರ್ಯದರ್ಶಿ ಶಶಿಕಾಂತ್, ಖಜಾಂಜಿ ಕೆ.ಪಿ.ಜಗನ್ನಾಥ್ ಹಾಗೂ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿ ಅಧಿಕಾರ ಹಸ್ತಾಂತರಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಕೋಟೇರ ಶಾಶ್ವತ್ ಬೋಪಣ್ಣ ವಹಿಸಿ ಸ್ವಾಗತಿಸಿದರು. ವೇದಿಕೆಯಲ್ಲಿ ಪ್ರಾಂತೀಯ ಅಧ್ಯಕ್ಷ ಕೆ.ಕೆ.ಅಯ್ಯಪ್ಪ, ವಲಯಾಧ್ಯಕ್ಷ ಪಿ.ಸಿ.ಸೋಮಣ್ಣ, ರತ್ನ ಚರ್ಮಣ್ಣ ಉಪಸ್ಥಿತರಿದ್ದರು. ವಿಜಯ¯ಕ್ಷ್ಮೀ ಶ್ರೀನಿವಾಸ್ ಪ್ರಾರ್ಥಿಸಿ, ಗ್ಲೇನ್ ಮೆನೆಜಸ್ ವಂದಿಸಿದರು.