ಗೋಣಿಕೊಪ್ಪಲು, ಜು. 28: ಪೊನ್ನಂಪೇಟೆ ಸಂತ ಅಂಥೋಣಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳು ವಿವಿಧ ನಾಯಕರುಗಳ, ಪ್ರಾಣಿ ಪಕ್ಷಿಗಳ ಮತ್ತು ಸಮಾಜಕ್ಕೆ ಉತ್ತಮ ಸಂದೇಶವನ್ನು ಸಾರುವ ಹಾಗೂ ರಕ್ತದಾನ ಶ್ರೇಷ್ಠದಾನ ಎಂಬ ಅರಿವು ಮೂಡಿಸುವ ಛದ್ಮವೇಷವನ್ನು ಧರಿಸಿ ಸಂಭ್ರಮಿಸಿದರು.

ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರ ತರುವ ನಿಟ್ಟಿನಲ್ಲಿ ಮತ್ತು ವೇದಿಕೆಯ ಭಯವನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಉತ್ತಮ ವೇದಿಕೆಯನ್ನು ನಿರ್ಮಾಣ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಎಲ್ಲ ಮಕ್ಕಳು ಉತ್ತಮವಾಗಿ ಭಾಗವಹಿಸಿದರು. ಶಾಲಾ ಮುಖ್ಯ ಶಿಕ್ಷಕಿ ಟೀನಾ ಮತ್ತು ಅಧ್ಯಾಪಕ ವೃಂದ ಮತ್ತು ಪೋಷಕರು ಭಾಗವಹಿಸಿದರು.