ಮಡಿಕೇರಿ, ಜು. 27: ಕುಶಾಲನಗರ 220 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ದುರಸ್ತಿ ಕಾರ್ಯವನ್ನು ನಿರ್ವಹಿಸಬೇಕಾಗುವದರಿಂದ ತಾ. 29 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆ ತನಕ ಕುಶಾಲನಗರ, ಸೋಮವಾರಪೇಟೆ, ಆಲೂರು ಸಿದ್ದಾಪುರ, ಸುಂಟಿಕೊಪ್ಪ ಹಾಗೂ ಮಡಿಕೇರಿ, ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವದು.

ಆದ್ದರಿಂದ ಕುಶಾಲನಗರ, ಕೂಡಿಗೆ, ನಂಜರಾಯಪಟ್ಟಣ, ಸುಂಟಿಕೊಪ್ಪ, ಚೆಟ್ಟಳ್ಳಿ, ಶಾಂತಳ್ಳಿ, ಕುಮಾರಹಳ್ಳಿ, ಗೌಡಳ್ಳಿ, ಹೆಗ್ಗಡಮನೆ ಅಬ್ಬೂರುಕಟ್ಟೆ, ಐಗೂರು, ಆಲೂರು ಸಿದ್ದಾಪುರ, ಗೋಣಿಮರೂರು, ಶನಿವಾರಸಂತೆ ಮಾಲಂಬಿ, ಹೊಸಗುತ್ತಿ, ಗಣಗೂರು ಮಡಿಕೇರಿ, ಮೇಕೇರಿ, ಕಡಗದಾಳು, ಭಾಗಮಂಡಲ, ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಚೆಸ್ಕಾಂ ಪ್ರಕಟಣೆ ತಿಳಿಸಿದೆ.

* ಅರಕಲಗೂಡುವಿನಿಂದ ಶನಿವಾರಸಂತೆಗೆ ಸರಬರಾಜಾಗುತ್ತಿರುವ 66/11ಕೆವಿ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ನಿರ್ವಹಿಸಬೇಕಾಗುವದರಿಂದ ತಾ. 28ರÀಂದು ಬೆಳಗ್ಗೆ 9 ಗಂಟೆಯಿಂದ ಸಂಜೆÀ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವದು. ಹಂಡ್ಲಿ, ಕೊಡ್ಲಿಪೇಟೆ, ಶನಿವಾರಸಂತೆ, ಗೋಪಲ್‍ಪುರ, ಗೌಡಳ್ಳಿ, ನಿಡ್ತ, ಅಂಕನಹಳ್ಳಿ, ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚೆಸ್ಕಾಂ ಪ್ರಕಟಣೆ ಕೋರಿದೆ.