ಮಡಿಕೇರಿ, ಜು.31: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರಕಾರ ನುಡಿದಂತೆ ನಡೆದಿದ್ದು, ಅನೇಕ ಜನಪರ ಭಾಗ್ಯಗಳನ್ನು ಘೋಷಿಸಿ ಅನುಷ್ಠಾನಗೊಳಿಸುವ ಮೂಲಕ ರಾಜ್ಯದ ಜನತೆಯನ್ನು ‘ಭಾಗ್ಯಶಾಲಿ’ಗಳನ್ನಾಗಿಸಿದೆ ಎಂದು ವಿಧಾನ ಪರಿಷತ್ ಸದಸೆÀ್ಯ ವೀಣಾ ಅಚ್ಚಯ್ಯ ಬಣ್ಣಿಸಿದ್ದಾರೆ.ಮುಖ್ಯಮಂತ್ರಿಗಳ ವಿಶೇಷ ಪ್ಯಾಕೇಜ್ ಅನುದಾನದಲ್ಲಿ ಬೆಟ್ಟಗೇರಿ ಪಂಚಾಯ್ತಿ ವ್ಯಾಪ್ತಿಯ ಗ್ರಾಮದ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಬೆಟ್ಟಗೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಭವನದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಕಾಂಗ್ರೆಸ್ ಕಾರ್ಯಕರ್ತರ ಕೋರಿಕೆಗೆ ಸ್ಪಂದಿಸುತ್ತಿರುವ ಮುಖ್ಯಮಂತ್ರಿಗಳು ವರ್ಷಕ್ಕೆ 50 ಕೋಟಿಯಂತೆ ಇಲ್ಲಿಯವರೆಗೆ ಒಟ್ಟು 200 ಕೋಟಿ ರೂ.ಗಳನ್ನು ಕೊಡಗಿನ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ನೀಡಿದ್ದಾರೆ. ಇದು ಮುಖ್ಯಮಂತ್ರಿಗಳಿಗೆ ಕೊಡಗು ಜಿಲ್ಲೆಯ ಮೇಲಿರುವ ಅಭಿಮಾನಕ್ಕೆ ಸಾಕ್ಷಿಯಾಗಿದೆ ಎಂದು ವೀಣಾಅಚ್ಚಯ್ಯ ಹೇಳಿದರು.