ಆಲೂರು-ಸಿದ್ದಾಪುರ, ಜು. 30: ಸರ್ಕಾರದಿಂದ ಇಂದು ಅನೇಕ ಸೌಲತ್ತುಗಳು ಸರ್ಕಾರಿ ಶಾಲೆಗಳಿಗೆ ಸಿಗುತ್ತಿದೆ ಎಂದು ಮಾಲಂಬಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಹೇಳಿದರು.

ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕ ವಿಶ್ವನಾಥ್ ಹಾಗೂ ಶಿಕ್ಷಕರು, ಪೋಷಕರು ಉಪಸ್ಥಿತರಿದ್ದರು.ಕೂಡಿಗೆ: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರಂಗಿಯಲ್ಲಿರುವ ಹುಲುಗುಂದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸರ್ಕಾರದಿಂದ ನೀಡುವ ಉಚಿತ ಸಮವಸ್ತ್ರ ಮತ್ತು ಶೂಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎಂ. ಯುವರಾಜ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾ.ಪಂ. ಸದಸ್ಯರಾದ ಭಾಸ್ಕರ್ ನಾಯಕ್ ಮತ್ತು ಶ್ರೀನಿವಾಸ್ ಸೇರಿದಂತೆ ಶಾಲೆಯ ಮುಖ್ಯ ಶಿಕ್ಷಕಿ ಮತ್ತು ಸಹ ಶಿಕ್ಷಕರು ಇದ್ದರು.