ಕುಶಾಲನಗರ, ಜು. 30: ಭಾರತೀಯ ಜನತಾ ಪಕ್ಷ ವಿಸ್ತಾರಕ್ ಕಾರ್ಯಕ್ರಮದ ಅಂಗವಾಗಿ ಕೊಪ್ಪ ಗ್ರಾಮದಲ್ಲಿ ಸರಕಾರಿ ಆರೋಗ್ಯ ಸಮುದಾಯ ಕೇಂದ್ರದಲ್ಲಿ ಗಿಡ ನೆಡುವುದು ಮತ್ತು ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಮಾಜಿ ಸಚಿವರಾದ ಎಂ. ಶಿವಣ್ಣ ಅವರ ನೇತೃತ್ವದಲ್ಲಿ ಆಸ್ಪತ್ರೆ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು. ಕಾರ್ಯಕರ್ತರು ಹಾಗೂ ತಾಲೂಕು ಪ್ರಮುಖರು ಆಸ್ಪತ್ರೆಯ ಆವರಣವನ್ನು ಸ್ವಚ್ಛಗೊಳಿಸುವ ಕಾರ್ಯದಲ್ಲಿ ಪಾಲ್ಗೊಂಡರು.