ಸೋಮವಾರಪೇಟೆ, ಜು.30: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಠಾಣೆಗೆ ಆಗಮಿಸಿದ ಯುವಕನ ಮೇಲೆ ಪೊಲೀಸ್ ಸಹಾಯಕ ಠಾಣಾಧಿಕಾರಿ ಹಲ್ಲೆ ನಡೆಸಿರುವ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಲಾಗಿದೆ.ಬಜೆಗುಂಡಿ ಗ್ರಾಮದಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೀಟ್ ಸದಸ್ಯರಾಗಿರುವ ಶಶಿಕಾಂತ್ ಅವರು ಠಾಣೆಗೆ ಆಗಮಿಸಿದ್ದ ಸಂದರ್ಭ ಎಎಸ್‍ಐ ಸಣ್ಣಪ್ಪ ಎಂಬವರು ಅವಾಚ್ಯ ಶಬ್ದಗಳಿಂದ ನಿಂದಿಸಿ ದೈಹಿಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಶಶಿಕಾಂತ್ ಅವರು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ.