ಸೋಮವಾರಪೇಟೆ, ಆ. 1: ಸೋಮವಾರದಂದು ನಿಧನರಾದ ರಾಜ್ಯ ಬಿ.ಜೆ.ಪಿಯ ಹಿರಿಯ ಮುಖಂಡ ಬಿ.ಬಿ ಶಿವಪ್ಪ ಅವರ ಪಾರ್ಥಿವ ಶರೀರಕ್ಕೆ ಕೊಡ್ಲಿಪೇಟೆ ಸಮೀಪದ ಕುಂಬ್ರಳ್ಳಿ ಗ್ರಾಮದಲ್ಲಿ ವಿವಿಧ ರಾಜಕೀಯ ಮುಖಂಡರು ಮಂಗಳವಾರ ಅಂತಿಮ ನಮನ ಸಲ್ಲಿಸಿದರು.

ಬೆಳಿಗ್ಗೆಯಿಂದಲೆ ರಾಜ್ಯದ ವಿವಿಧೆಡೆಗಳಿಂದ ಜನರು ಆಗಮಿಸಿ ನಮನ ಸಲ್ಲಿಸಿದರು. ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು, ಶಾಸಕ ಎಚ್.ಡಿ. ರೇವಣ್ಣ, ವೀರಾಜಪೇಟೆ, ಮಡಿಕೇರಿ ಕ್ಷೇತ್ರದ ಶಾಸಕರಾದ ಕೆ.ಜಿ ಬೋಪಯ್ಯ, ಎಂ.ಪಿ. ಅಪ್ಪಚ್ಚುರಂಜನ್, ಕೊಡಗು ಜಿಲ್ಲಾ ಪಂಚಾಯಿತಿ ಅಧಕ್ಷ ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಅಂತಿಮದರ್ಶನ ಪಡೆದರು.

ವೀರಾಜಪೇಟೆ ಅರಮೇರಿ ಕಳಂಚೇರಿ ಮಠದ ಶಾಂತಮಲ್ಲಿ ಕಾರ್ಜುನ ಸ್ವಾಮೀಜಿ, ಕೊಡ್ಲಿಪೇಟೆ ಕಲ್ಲುಮಠದ ಮಹಾಂತ ಸ್ವಾಮೀಜಿ, ಕಿರಿಕೊಡ್ಲಿ ಮಠದ ಸಧಾಶಿವ ಸ್ವಾಮೀಜಿ, ಸೋಮವಾರಪೇಟೆ ವಿರಕ್ತ ಮಠದ ವಿಶ್ವೇಶ್ವರ ಸ್ವಾಮೀಜಿ, ಬಸವಪಟ್ಟಣದ ಸ್ವತಂತ್ರಬಸವಲಿ ಸ್ವಾಮೀಜಿ, ಅರಕಲಗೂಡು ಚಿಲುಮೆ ಮಠದ ಜಯದೇವ ಸ್ವಾಮೀಜಿ, ಮಾಜಿ ಸಚಿವ ರಾಮಚಂದ್ರೇಗೌಡ, ಮಾಜಿ ಸಚಿವ ಎಚ್. ವಿಶ್ವನಾಥ್, ಪ್ರಮುಖರಾದ ಗೋ, ಮಧುಸೂದನ್, ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷ್ಮೀ, ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಸ್. ಮಹೇಶ್, ಜಿಲ್ಲಾ ವೀರಶೈವ ಮಹಾಸಭಾದ ಅಧ್ಯಕ್ಷ ಡಿ.ಬಿ.ಧರ್ಮಪ್ಪ, ತಾಲ್ಲೂಕು ಘಟಕದ ಅಧ್ಯಕ್ಷ ವಿಶ್ವನಾಥ್ ಅವರುಗಳು ಅಂತಿಮ ನಮನ ಸಲ್ಲಿಸಿದರು.