ಸಿದ್ದಾಪುರ, ಆ. 6: ನೆಲ್ಲಿಹುದಿಕೇರಿಯ ಕುಂಬಾರಗುಂಡಿಯಲ್ಲಿ ದುಸ್ಥಿತಿಯಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ಜಿ.ಪಂ. ಸದಸ್ಯೆ ಸುನಿತಾ ಮಂಜುನಾಥ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.ನಂತರ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾಧಿಕಾರಿ ಸಂಪತ್ ಕುಮಾರ್, ಈಗಾಗಲೇ ತಾ.ಪಂ. ವತಿಯಿಂದ ರೂ. 50 ಸಾವಿರ ಕಟ್ಟಡ ನಿರ್ಮಾಣಕ್ಕೆ ಮೀಸಲಿಡಲಾಗಿದ್ದು, ನೂತನ ಕಟ್ಟಡಕ್ಕೆ ರೂ. 50 ಸಾವಿರ ಸಾಲದ ಕಾರಣ ಉದ್ಯೋಗ ಖಾತ್ರಿ ಯೋಜನೆ ಮೂಲಕ ಕಟ್ಟಡ ನಿರ್ಮಾಣ ಮಾಡುವ ಬಗ್ಗೆ ಗ್ರಾ.ಪಂ.ನೊಂದಿಗೆ ಚರ್ಚಿಸಲಾಗುವದು ಎಂದರು

ಈ ಸಂದರ್ಭ ಗ್ರಾ.ಪಂ. ಉಪಾಧ್ಯಕ್ಷೆ ಸಫಿಯ ಇದ್ದರು.