ವೀರಾಜಪೇಟೆ, ಆ. 6: ವೀರಾಜಪೇಟೆ ತಾಲೂಕು ಹಿಂದು ಜಾಗರಣಾ ವೇದಿಕೆಯ ವತಿಯಿಂದ ತಾ: 9ರಂದು ಅಖಂಡ ಭಾರತ ಸಂಕಲ್ಪ ಸಪ್ತಾಹದ ದಿನಾಚರಣೆಯನ್ನು ಆಚರಿಸಲಾಗುವುದೆಂದು ಸಂಘಟನೆಯ ತಾಲೂಕು ಸಂಚಾಲಕ ಬಿ.ಎನ್.ಯೋಗೇಶ್ ತಿಳಿಸಿದ್ದಾರೆ.ಈ ಸಂಕಲ್ಪದ ದಿನಾಚರಣೆಯ ಪ್ರಯುಕ್ತ ತಾ. 9ರಂದು ಬುಧವಾರ ಅಪರಾಹ್ನ 1 ಗಂಟೆಗೆ ಇಲ್ಲಿನ ತೆಲುಗರ ಬೀದಿಯ ಮಾರಿಯಮ್ಮ ದೇವಾಲಯದಿಂದ ನಗರದ ಮುಖ್ಯ ಬೀದಿಗಳಲ್ಲಿ ವಾಹನ ಜಾಥಾವನ್ನು ಏರ್ಪಡಿಸಲಾಗಿದೆ. ನಂತರ ಅಪರಾಹ್ನ 2-30ಗಂಟೆಗೆ ಇಲ್ಲಿನ ಕಾವೇರಿ ಕಲ್ಯಾಣ ಮಂಟಪದಲ್ಲಿ ಬೃಹತ್ ಸಭಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ವೀರಾಜಪೇಟೆ ತಾಲೂಕು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ತಾಲೂಕು ಸಂಘ ಚಾಲಕÀ ಪ್ರಿನ್ಸ್ ಗಣಪತಿ ಅಧ್ಯಕ್ಷತೆ ವಹಿಸಲಿದ್ದು ರಾಜ್ಯ ಹಿಂದು ಜಾಗರಣಾ ವೇದಿಕೆಯ ಪ್ರಾಂತ ಸಂಘಟನಾ ಕಾರ್ಯದರ್ಶಿ ದೋ. ಕೇಶವಮೂರ್ತಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಭಾಷಣ ಮಾಡಲಿರುವರು ಎಂದು ಸಂಘಟನೆಯ ತಾಲೂಕು ಕಾರ್ಯದರ್ಶಿ ಎಂ.ಬಿ.ಚಂದ್ರನ್ ತಿಳಿಸಿದರು.