ಕುಶಾಲನಗರ, ಆ. 7: ತಮಿಳುನಾಡಿನ ವೆಲ್ಲೂರು ಬಳಿ ನಡೆದ ಸರಣಿ ಕಾರು ಅಪಘಾತದಲ್ಲಿ ತೀವ್ರ ಗಾಯಗೊಂಡಿರುವ ಕುಶಾಲನಗರದ ಯುವಕರು ಬೆಂಗಳೂರು ಮತ್ತು ವೆಲ್ಲೂರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದ್ದು ಇನ್ನೋರ್ವ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.ಭಾನುವಾರ ಚೆನ್ನೈಗೆ ತೆರಳುತ್ತಿದ್ದ ಸಂದರ್ಭ ನಡೆದ ಅವಘಡದಲ್ಲಿ ಕುಶಾಲನಗರದ ಉದ್ಯಮಿ ವಿ.ಟಿ.ದಿನೇಶ್ ಎಂಬವರ ಪುತ್ರ ಕೀರ್ತನ್ ಸೇರಿದಂತೆ ಮೂವರು ಯುವಕರಿಗೆ ತೀವ್ರ ಗಾಯಗಳುಂಟಾಗಿತ್ತು. ಕೀರ್ತನ್ ಬೆಂಗಳೂರಿನ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿಶಾಂತ್ ಅಲ್ಪಸ್ವಲ್ಪ ಗಾಯಗೊಂಡು ಹೊರರೋಗಿಯಾಗಿ ಚಿಕಿತ್ಸೆಗೆ ಒಳಗಾಗಿದ್ದಾರೆ. ಸೈಫ್ ಎಂಬಾತ ವೆಲ್ಲೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ದಿನೇಶ್ ಮಾಹಿತಿ ನೀಡಿದ್ದಾರೆ.