ಕುಶಾಲನಗರ, ಆ. 7: ಕರ್ನಾಟಕ ಜಾನಪದ ಪರಿಷತ್ ಸೋಮವಾರಪೇಟೆ ತಾಲೂಕು ಘಟಕ ಆಶ್ರಯದಲ್ಲಿ ತಾ. 8 ರಂದು (ಇಂದು) ದೊಡ್ಡಬೆಟಗೇರಿಯಲ್ಲಿ ಪರಿಷತ್ ಸದಸ್ಯರಿಗೆ ಮತ್ತು ವಿದ್ಯಾರ್ಥಿಗಳಿಗೆ ಕೆಸರುಗದ್ದೆ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ. ಗುಡ್ಡೆಹೊಸೂರು ಗ್ರಾಮದ ದೊಡ್ಡಬೆಟಗೇರಿಯ ಬಿ.ಡಿ.ವೀರೇಂದ್ರ ಅವರ ಗದ್ದೆಯಲ್ಲಿ ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮಕ್ಕೆ ಪರಿಷತ್ ಜಿಲ್ಲಾಧ್ಯಕ್ಷರಾದ ಬಿ.ಜಿ. ಅನಂತಶಯನ ಗಿಡ ನೆಡುವ ಮೂಲಕ ಚಾಲನೆ ನೀಡುವರು.

ಕರ್ನಾಟಕ ಜಾನಪದ ಪರಿಷತ್ ಸೋಮವಾರಪೇಟೆ ತಾಲೂಕು ಘಟಕದ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಬಿ.ಭಾರತೀಶ್ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಜಾನಪದ ಪರಿಷತ್ ಮಡಿಕೇರಿ ತಾಲೂಕು ಘಟಕ ಅಧ್ಯಕ್ಷರಾದ ಹೆಚ್.ಟಿ.ಅನಿಲ್, ತಾಲೂಕಿನ ಪ್ರಗತಿಪರ ಕೃಷಿಕರಾದ ಬಿ.ಎಸ್.ಧನಪಾಲ್, ಗುಡ್ಡೆಹೊಸೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಸಣ್ಣಸ್ವಾಮಿ ಪಾಲ್ಗೊಳ್ಳುವರು.