ಸಿದ್ದಾಪುರ, ಆ. 8 : ಕೇಂದ್ರ ಸರ್ಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕೆಂದು ಶಾಸಕ ಅಪ್ಪಚ್ಚು ರಂಜನ್ ಕರೆ ನೀಡಿದರು.

ನೆಲ್ಯಹುದಿಕೇರಿಯ ಶ್ರೀ ಮುತ್ತಪ್ಪ ಸಭಾಂಗಣದಲ್ಲಿ ನಡೆದ ಬಿ.ಜೆ.ಪಿ ಪಕ್ಷದ ವಿಸ್ತಾರಕ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕರು ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ Àಂದರ್ಭದಲ್ಲಿ ಮುಸ್ಲಿಂ ಸಮುದಾಯಕ್ಕೆ ಶಾದಿ ಮಹಲ್ ಯೋಜನೆಯನ್ನು ಜಾರಿಗೆ ತಂದು ಹಲವಾರು ಸಭಾಂಗಣವನ್ನು ನಿರ್ಮಿಸಲಾಗಿದೆ. ನೆಲ್ಯಹುದಿಕೇರಿಯ ಕುಂಬಾರಗುಂಡಿ ರಸ್ತೆ ಹಾಗೂ ಹಿಂದೂ ರುದ್ರ ಭೂಮಿಯ ಕಾಮಗಾರಿಗೆ ರೂ. 22 ಲಕ್ಷ ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ವಿಸ್ತಾರಕರಾದ ಸೋಮೇಶ್, ಭಾಸ್ಕರ್, ರಮೇಶ್, ತುಷಾರ್, ಬಿ.ಜೆ.ಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಕೆ ಲೋಕೇಶ್, ಸ್ಥಾನೀಯ ಸಮಿತಿ ಅಧ್ಯಕ್ಷ ಕೆ.ಟಿ ಷಾಜಿ, ಕಾರ್ಯದರ್ಶಿ ಮಂಜು, ಗ್ರಾ. ಪಂ. ಸದಸ್ಯರುಗಳಾದ ಶಶಿ, ಯೋಗೇಶ್, ಮೈನಾ, ಬಿಂದು, ಬ್ರಿಜೆಟ್ ಲಿಲ್ಲಿ ಪಕ್ಷದ ಮುಖಂಡರುಗಳಾದ ಟಿ.ಸಿ ಅಶೋಕ, ಪಿ.ಸಿ. ಅಚ್ಚಯ್ಯ ಇನ್ನಿತರರು ಹಾಜರಿದ್ದರು.