ಕುಶಾಲನಗರ, ಆ. 11: ಕುಶಾಲನಗರದ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಗುರುರಾಘವೇಂದ್ರ ಸ್ವಾಮಿಯ 346ನೇ ಆರಾಧನ ಮಹೋತ್ಸವ ನಡೆಯಿತು.

ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆಯಿಂದ ಸ್ವಾಮಿಗೆ ವಿಶೇಷ ಪೂಜಾ ವಿಧಿವಿಧಾನಗಳು ಜರುಗಿದವು. ಅರ್ಚಕರಾದ ಕೃಷ್ಣಮೂರ್ತಿ ಭಟ್, ಸೋಮೇಶ್ವರ್ ಭಟ್ ನೇತೃತ್ವದಲ್ಲಿ ಪೂಜಾ ವಿಧಿ ನೆರವೇರಿಸಲಾಯಿತು.

ಮಧ್ಯಾಹ್ನ ಮಹಾಮಂಗಳಾರತಿ ಬಳಿಕ ನೆರೆದಿದ್ದ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ನಡೆಯಿತು. ಕುಶಾಲನಗರ ಸೇರಿದಂತೆ ಸುತ್ತಮುತ್ತಲ ನೂರಾರು ಭಕ್ತಾದಿಗಳು ಪೂಜೋತ್ಸವದಲ್ಲಿ ಪಾಲ್ಗೊಂಡರು. ದೇವಾಲಯ ಸೇವಾ ಟ್ರಸ್ಟ್ ಅಧ್ಯಕ್ಷ ಬಿ.ಪಿ. ಗಣಪತಿ, ಉಪಾಧ್ಯಕ್ಷ ವಿ.ಆರ್. ಶಿವಶಂಕರ್, ಕಾರ್ಯದರ್ಶಿ ನಾಲ್ವಡೆ ಮಹೇಶ್ ಕುಮಾರ್, ಖಜಾಂಚಿ ಕೆ.ಆರ್. ಸುಬ್ರಮಣಿ ಸೇರಿದಂತೆ ಟ್ರಸ್ಟಿಗಳು ಇದ್ದರು.