ಗೋಣಿಕೊಪ್ಪಲು, ಆ. 13: ಕರ್ನಾಟಕ ಪ್ರಿಮಿಯರ್ ಲೀಗ್ ಹಾಗೂ ರಾಜ್ಯ ರಣಜಿ ಕ್ರಿಕೆಟ್ ಟೂರ್ನಿಗೆ ಕೊಡಗಿನ ಮಾಚಿಮಂಡ ಕುಮಾರ್ ಅಪ್ಪಚ್ಚು ಅವರನ್ನು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಯಾಗಿ ರಾಜ್ಯ ಕ್ರಿಕೆಟ್ ಸಂಸ್ಥೆ ನೇಮಿಸಿದೆ. ಸೆಪ್ಟೆಂಬರ್ 1 ರಿಂದ ಆರಂಭಗೊಳ್ಳಲ್ಲಿರುವ ಕೆಪಿಎಲ್ ಹಾಗೂ ಅಕ್ಟೋಬರ್‍ನಲ್ಲಿ ನಡೆಯುವ ರಣಜಿ ಟೂರ್ನಿ ಸಂದರ್ಭ ಭೃಷ್ಠಾಚಾರ ನಿಗ್ರಹ ದಳ ಅಧಿಕಾರಿಯಾಗಿ ಅವರು ಕಾರ್ಯನಿರ್ವಹಿಸಲಿದ್ದಾರೆ.