ಮಡಿಕೇರಿ, ಆ. 13: ಗಣೇಶೋತ್ಸವ ಆಚರಣೆಯ ಹಿನ್ನೆಲೆಯಲ್ಲಿ ನಗರ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ನಡೆಯಿತು.

ಉಪ ಪೊಲೀಸ್ ಅಧೀಕ್ಷಕ ಸುಂದರ್‍ರಾಜ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಗಣೇಶೋತ್ಸವವನ್ನು ಶಾಂತಿ-ಸೌಹಾರ್ದತೆಯಿಂದ ಆಚರಿಸುವಂತೆ ಸಲಹೆ ನೀಡಿದರು. ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವದಕ್ಕೆ ಸಂಬಂಧಿಸಿದಂತೆ ಜಾಗಕ್ಕೆ ಸಂಬಂಧಿಸಿದವರ ಅನುಮತಿ, ನಗರಸಭೆ ಹಾಗೂ ವಿದ್ಯುತ್ ಸಂಪರ್ಕ ಪಡೆಯುವದಾದಲ್ಲಿ ಅನುಮತಿ ಪಡೆದುಕೊಂಡು ಯಾವದೇ ಅಹಿತಕರ ಘಟನೆ ನಡೆಯದಂತೆ ಜಾಗ್ರತೆ ವಹಿಸಿ ಆಚರಿಸುವಂತೆ ಮನವಿ ಮಾಡಿದರು.

ಈ ಸಂದರ್ಭ ಶಾಂತಿನಿಕೇತನ ಗಣೇಶೋತ್ಸವ ಸಮಿತಿ ಪ್ರಮುಖರಾದ ಚೇತನ್, ಪ್ರಸನ್ನಭಟ್ ಸೇರಿದಂತೆ ಹಲವು ಸಮಿತಿಗಳ ಪ್ರಮುಖರು ಹಾಜರಿದ್ದರು. ನಗರ ವೃತ್ತ ನಿರೀಕ್ಷಕ ಮೇದಪ್ಪ ಸೇರಿದಂತೆ ನಗರ ಠಾಣಾಧಿಕಾರಿ, ಪೊಲೀಸ್ ಸಿಬ್ಬಂದಿಗಳು ಇದ್ದರು.