ಮಡಿಕೇರಿ, ಆ. 15: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಕರ್ಷಕ ಪಥಸಂಚಲನ ನೆರವೇರಿತು. ಜಿಲ್ಲಾ ಪೊಲೀಸ್ ಇಲಾಖೆ, ಹೋಂ ಗಾರ್ಡ್, ವಿವಿಧ ಶಾಲಾ - ಕಾಲೇಜುಗಳು, ಎನ್.ಸಿ.ಸಿ., ಸ್ಕೌಟ್ ಮತ್ತು ಗೈಡ್ಸ್, ರೋವರ್ಸ್ ತಂಡಗಳು ಪಥಸಂಚಲನದಲ್ಲಿ ಸಾಗಿದವು. ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ ಗೌರವ ವಂದನೆ ಸ್ವೀಕರಿಸಿದರು.

ಸಂತ ಜೋಸೆಫರ ಶಾಲೆ, ಸಂತ ಮೈಕಲರ ಶಾಲೆ, ರಾಜೇಶ್ವರಿ ವಿದ್ಯಾಲಯ, ಕೇಂದ್ರೀಯ ವಿದ್ಯಾಲಯದ ಕಲಾವಿದ ಮಕ್ಕಳು ನಡೆಸಿಕೊಟ್ಟ ಸಾಂಸ್ಕøತಿಕ ಕಾರ್ಯಕ್ರಮಗಳು ಗಮನ ಸೆಳೆದವು.

ಸಾಧಕರಿಗೆ ಸನ್ಮಾನ : ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ., ಪಿಯುಸಿಯಲ್ಲಿ ಅಧಿಕ ಅಂಕಗಳಿಸಿದ ವಿದ್ಯಾರ್ಥಿಗಳು, ಬೇರೆ ಬೇರೆ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು. ಸರಕಾರಿ ಶಾಲೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಿಸಲಾಯಿತು. ವಿಶೇಷವಾಗಿ ರಾಷ್ಟ್ರಪತಿಗಳ ಪ್ರಶಸ್ತಿಗೆ ಭಾಜನರಾದ ಕೊಡಗು ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರ ಪ್ರಸಾದ್ ಅವರನ್ನು ಕೂಡ ಸನ್ಮಾನಿಸಲಾಯಿತು.