ಮಡಿಕೇರಿ, ಆ. 17: ಪೊಲೀಸ್ ಇಲಾಖೆಯಲ್ಲಿನ ಉತ್ತಮ ಕಾರ್ಯನಿರ್ವಹಣೆಗಾಗಿ ನೀಡುವ ಪ್ರತಿಷ್ಠಿತ ರಾಷ್ಟ್ರಪತಿ ಪದಕಕ್ಕೆ ಈ ಬಾರಿ ಭಾಜನರಾಗಿರುವ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರ ಪ್ರಸಾದ್ ಅವರಿಗೆ ಮಡಿಕೇರಿ ಉಪವಿಭಾಗದ ಸಿಬ್ಬಂದಿಗಳು ಗೌರವ ಸಲ್ಲಿಸಿ ಸನ್ಮಾನಿಸಿದರು.

ಕಾರ್ಯಕ್ರಮದಲ್ಲಿ ಮಡಿಕೇರಿ ಉಪ ವಿಭಾಗದ ಡಿವೈಎಸ್‍ಪಿ ಸುಂದರ್‍ರಾಜ್ ಸೇರಿದಂತೆ ಇತರ ಅಧಿಕಾರಿಗಳು, ಸಿಬ್ಬಂದಿಗಳು, ಎಸ್‍ಪಿ ಅವರನ್ನು ಸನ್ಮಾನಿಸಿದರು.