ನಾಪೆÇೀಕ್ಲು, ಆ. 22: ಕನ್ನಡ ಜಾನಪದ ಪರಿಷತ್ತಿನ ಜಿಲ್ಲಾ ಘಟಕದ ಆಶ್ರಯದಲ್ಲಿ ಮಡಿಕೇರಿ ತಾಲೂಕು ಘಟಕದ ಉದ್ಘಾಟನೆ ತಾ. 23ರಂದು (ಇಂದು) ಪೂರ್ವಾಹ್ನ 10.30 ಗಂಟೆಗೆ ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ. ಕನ್ನಡ ಜಾನಪದ ಪರಿಷತ್ತಿನ ರಾಜ್ಯ ಕಾರ್ಯಾಧ್ಯಕ್ಷ ಡಾ.ಎಸ್. ಬಾಲಾಜಿ ಘಟಕವನ್ನು ಉದ್ಘಾಟಿಸಲಿ ರುವರು. ನಿವೃತ್ತ ಪ್ರಾಂಶುಪಾಲ ಪ್ರೊ. ಕಲ್ಯಾಟಂಡ ಪೂಣಚ್ಚ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕನ್ನಡ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷೆ ಡಾ. ಕಾವೇರಿ ಪ್ರಕಾಶ್, ರಾಜ್ಯ ಸಂಚಾಲಕಿ ಡಾ. ಕನಕತಾರ, ಯುವ ಸಬಲೀಕರಣ ಇಲಾಖೆಯ ನಿರ್ದೇಶಕಿ ಜಯಲಕ್ಷ್ಮಿ ಬಾಯಿ ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಜಾನಪದ ಕಲಾವಿದ ಚೌರೀರ ತಿಮ್ಮಯ್ಯ ಅವರನ್ನು ಸನ್ಮಾನಿಸಲಾಗುವದು. ಕಲಾವಿದ ಅಮ್ಮರಾಮಚಂದ್ರ ಅವರಿಂದ ಜಾನಪದ ಗೀತಗಾಯನ ಮತ್ತು ವಿವಿಧ ತಂಡಗಳಿಂದ ಜಾನಪದ ನೃತ್ಯಪ್ರದರ್ಶನ ಹಮ್ಮಿಕೊಳ್ಳಲಾಗಿದೆ.