ಕುಶಾಲನಗರ, ಸೆ. 1: ಮಹಾರಾಷ್ಟ್ರದ ಪರ ಹೇಳಿಕೆ ನೀಡಿದ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಮಹಿಳಾ ಘಟಕ ವತಿಯಿಂದ ಪ್ರತಿಭಟನೆ ನಡೆಯಿತು.ಪಟ್ಟಣದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಮಹಿಳಾ ಘಟಕದ ಪದಾಧಿಕಾರಿಗಳು ಕನ್ನಡ ವಿರೋಧಿ ಹೇಳಿಕೆ ನೀಡಿದ ಲಕ್ಷ್ಮಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳಾ, ಕನ್ನಡ ವಿರೋಧಿ ಹೇಳಿಕೆ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್ ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ಮಹಿಳಾ ಘಟಕದ ತಾಲೂಕು ಉಪಾಧ್ಯಕ್ಷೆ ನಿರ್ಮಲಾ ಸುರೇಶ್, ನಗರ ಘಟಕದ ಅಧ್ಯಕ್ಷೆ ಸರಳಾ ರಾಮಣ್ಣ, ಗುಡ್ಡೆಹೊಸೂರು ಗ್ರಾಮಪಂಚಾಯಿತಿ ಸದಸ್ಯೆ ಪುಷ್ಪಾ, ಕೂಡುಮಂಗಳೂರು ಗ್ರಾಮಪಂಚಾಯಿತಿ ಸದಸ್ಯರುಗಳಾದ ಜ್ಯೋತಿ, ಪ್ರಮೀಳ, ಸಾವಿತ್ರಿ ರಾಜು, ಪ್ರಮುಖರಾದ ಸರೋಜ, ಕಮಲ ದೇವಯ್ಯ, ನಗರ ಘಟಕದ ಅಧ್ಯಕ್ಷ ಕೆ.ಜಿ.ಮನು, ಕಾರ್ಯದರ್ಶಿ ಹೆಚ್.ಡಿ.ಶಿವಾಜಿ, ಯುವಮೋರ್ಚಾ ಕಾರ್ಯದರ್ಶಿ ನಿಡ್ಯಮಲೆ ದಿನೇಶ್ ಮತ್ತಿತರರು ಇದ್ದರು.