ಮಡಿಕೇರಿ, ಸೆ. 6: ಸಾಹಿತಿ ಐತಿಚಂಡ ರಮೇಶ್ ಉತ್ತಪ್ಪ ರಚಿಸಿದ “1965ರ ಯುದ್ಧ ಹಾಗೂ ಕೊಡಗಿನ ಮಹಾವೀರ” ಕೃತಿ ಬಿಡುಗಡೆ ಕಾರ್ಯಕ್ರಮ ತಾ. 7 ರಂದು (ಇಂದು) ನಡೆಯಲಿದೆ. ನಗರದ ಕೊಡವ ಸಮಾಜದಲ್ಲಿ ಬೆಳಿಗ್ಗೆ 10.30ಕ್ಕೆ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಈ ಕೃತಿ ಬಿಡುಗಡೆಯಾಗಲಿದೆ. ಇದಕ್ಕೂ ಮುನ್ನ ಬೆಳಿಗ್ಗೆ 10 ಗಂಟೆಗೆ ಸ್ಕ್ವಾಡ್ರನ್ ಲೀಡರ್ ದೇವಯ್ಯ ಅವರ ವೃತ್ತದಲ್ಲಿ ಕೊಡವ ಮಕ್ಕಡ ಕೂಟ ಹಾಗೂ ಅಜ್ಜಮಾಡ ಕುಟುಂಬದಿಂದ ಕಾರ್ಯಕ್ರಮ ನಡೆಯಲಿದೆ.