ಸೋಮವಾರಪೇಟೆ, ಸೆ. 12: ಇಲ್ಲಿನ ಕೊಡವ ಸಮಾಜದ ಆಶ್ರಯದಲ್ಲಿ ತಾ. 17ರಂದು ಕೈಲ್ ಮುಹೂರ್ತ ಸಂತೋಷ ಕೂಟ ಸಮಾರಂಭ ನಡೆಯಲಿದೆ ಎಂದು ಸಮಾಜದ ಅಧ್ಯಕ್ಷ ಮಾಳೇಟಿರ ಬಿ. ಅಭಿಮನ್ಯು ಕುಮಾರ್ ತಿಳಿಸಿದ್ದಾರೆ.

ಅಂದು ಬೆಳಿಗ್ಗೆ 10.30ಕ್ಕೆ ನಡೆಯಲಿರುವ ಕಾರ್ಯಕ್ರಮವನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಪ್ರತಾಪ ಸಿಂಹ, ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ನಂದಿನೆರವಂಡ ನಾಚಪ್ಪ ಪಾಲ್ಗೊಳ್ಳಲಿದ್ದಾರೆ. ಜನಾಂಗ ಬಾಂಧವರಿಗೆ ವಿವಿಧ ಸ್ಪರ್ಧಾ ಕಾರ್ಯಕ್ರಮಗಳು ನಡೆಯಲಿವೆ ಎಂದು ಅಭಿಮನ್ಯು ಕುಮಾರ್ ಮಾಹಿತಿ ನೀಡಿದ್ದಾರೆ.