ಮಡಿಕೇರಿ, ಸೆ. 12: ಕುಶಾಲನಗರ 220 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ನಿರ್ವಹಿಸಬೇಕಾಗುವದರಿಂದ ಕ.ವಿ.ಪ್ರ.ನಿ.ನಿ. ರವರ ಕೋರಿಕೆಯಂತೆ ತಾ. 13 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ 220 ಕೆವಿ ಕುಶಾಲನಗರ, 33/11ಕೆವಿ ಸೋಮವಾರಪೇಟೆ, 66/11ಕೆವಿ, ಆಲೂರು ಸಿದ್ದಾಪುರ 66/11 ಕೆವಿ, ಸುಂಟಿಕೊಪ್ಪ ಹಾಗೂ 66/11ಕೆವಿ ಮಡಿಕೇರಿ, ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವದು. ಆದ್ದರಿಂದ ಕುಶಾಲನಗರ, ಕೂಡಿಗೆ, ನಂಜರಾಯಪಟ್ಟಣ, ಸುಂಟಿಕೊಪ್ಪ, ಚೆಟ್ಟಳ್ಳಿ, ಶಾಂತಳ್ಳಿ, ಕುಮಾರಹಳ್ಳಿ, ಗೌಡಳ್ಳಿ, ಹೆಗ್ಗಡಮನೆ ಅಬ್ಬೂರುಕಟ್ಟೆ, ಐಗೂರು, ಆಲೂರು ಸಿದ್ದಾಪುರ, ಗೋಣಿಮರೂರು, ಶನಿವಾರಸಂತೆ, ಮಾಲಂಬಿ, ಹೊಸಗುತ್ತಿ, ಗಣಗೂರು, ಮಡಿಕೇರಿ, ಮೇಕೇರಿ, ಕಡಗದಾಳು, ಭಾಗಮಂಡಲ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ಈ ಮೇಲೆ ತಿಳಿಸಿರುವ ಸಮಯದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

* ವಿದ್ಯುತ್ ವಿತರಣಾ ಕೇಂದ್ರ ಮತ್ತು ಮಾರ್ಗದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ನಿರ್ವಹಿಸಬೇಕಾಗುವದರಿಂದ ಕ.ವಿ.ಪ್ರ.ನಿ.ನಿ. ಅವರ ಕೋರಿಕೆಯಂತೆ ತಾ. 14 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ 66/11ಕೆವಿ ಪೊನ್ನಂಪೇಟೆ, 66/11ಕೆವಿ ವೀರಾಜಪೇಟೆ, 33/11ಕೆವಿ ಶ್ರೀಮಂಗಲ, 33/11ಕೆವಿ ಸಿದ್ದಾಪುರ ಹಾಗೂ 33/11ಕೆವಿ ಮೂರ್ನಾಡು ವಿದ್ಯುತ್ ಉಪಕೇಂದ್ರದಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವದು. ಆದ್ದರಿಂದ ಪೊನ್ನಂಪೇಟೆ, ಗೋಣಿಕೊಪ್ಪಲು, ಶ್ರೀಮಂಗಲ, ಬಾಳಲೆ, ಕಾನೂರು, ಬಿರುನಾಣಿ, ಕುಟ್ಟ, ವೀರಾಜಪೇಟೆ, ಬಿ. ಶೆಟ್ಟಿಗೇರಿ, ಬೇತ್ರಿ, ಕಡಗಮರೂರು, ಕಾಕೋಟುಪರಂಬು, ಅಮ್ಮತ್ತಿ, ಸಿದ್ದಾಪುರ, ಮಾಲ್ದಾರೆ, ಮೂರ್ನಾಡು, ಮರಗೋಡು, ನಾಪೋಕ್ಲು ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ಈ ಮೇಲೆ ತಿಳಿಸಿರುವ ಸಮಯದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ.