25ಕ್ಕೂ ಅಧಿಕ ಮಂದಿ ವಿರುದ್ಧ ಪ್ರಕರಣ ದಾಖಲು ಸಿದ್ದಾಪುರ, ಸೆ. 12: ರಸ್ತೆ ತಡೆಗೆ ಅನುಮತಿ ಪಡೆಯದೆ ರಸ್ತೆ ತಡೆ ನಡೆಸಿದ ಹಿನ್ನೆಲೆಯಲ್ಲಿ 25 ಕ್ಕೂ ಅಧಿಕ ಮಂದಿಯ ವಿರುದ್ಧ ಸಿದ್ದಾಪುರ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.

ಇತ್ತೀಚೆಗೆ ಸಿದ್ದಾಪುರದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಕಂಠಿ ಕಾರ್ಯಪ್ಪ ಬಂಧನಕ್ಕೆ ಒತ್ತಾಯಿಸಿ ನಿನ್ನೆ ಸಿದ್ದಾಪುರದ ಯುನೈಟೆಡ್ ಮುಸ್ಲಿಂ ಅಸೋಸಿಯೇಷನ್ ವತಿಯಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಈ ಸಂದರ್ಭ ರಸ್ತೆ ತಡೆ ನಡೆಸಲಾಗಿದೆ ಹಾಗೂ ಅನುಮತಿ ಪಡೆಯದೆ ದ್ವನಿವರ್ಧಕ ಬಳಸಲಾಗಿದೆ ಎಂದು ಸಿದ್ದಾಪುರ ಪೊಲೀಸರು ವೀಡಿಯೋ ದೃಶ್ಯವನ್ನು ಆಧರಿಸಿ ವಿ.ಕೆ ಬಷೀರ್, ಶೌಕತ್ ಆಲಿ, ಅಬ್ದುಲ್ ಶುಕೂರ್, ಮುಸ್ತಫ ಸೇರಿದಂತೆ ಸುಮಾರು 25 ಕ್ಕೂ ಅಧಿಕ ಮಂದಿಯ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ಸುಬ್ರಮಣ್ಯ ಪ್ರಕರಣ ದಾಖಲಿಸಿದ್ದಾರೆ.