ಸಿದ್ದಾಪುರ, ಸೆ. 12: ಸಿದ್ದಾಪುರ ಗ್ರಾಮ ಪಂಚಾಯಿತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮಹಾತ್ವಾಕಾಂಕ್ಷಿಯ ಯೋಜನೆಯಾದ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಸಿಲಿಂಡರ್ ಅನ್ನು 33 ಫಲಾನುಭವಿಗಳಿಗೆ ಗ್ರಾ.ಪಂ. ಅಧ್ಯಕ್ಷ ಮಣಿ, ಉಪಾಧ್ಯಕ್ಷೆ ರಾಜೇಶ್ವರಿ ಅವರು ವಿತರಿಸಿದರು.

ಈ ಸಂದರ್ಭ ಸಿದ್ದಾಪುರ ಗ್ರಾ.ಪಂ. ಸದಸ್ಯರುಗಳಾದ ಟಿ.ಎಸ್. ಮಂಜುನಾಥ್, ಪೂವಮ್ಮ, ಶಾರಾದ, ಮಾಜಿ ಗ್ರಾ.ಪಂ. ಉಪಾಧ್ಯಕ್ಷ ಹೆಚ್.ಎಂ. ಮೂಸ, ಚೇರಳ ಶ್ರೀಮಂಗಲ ಇಂಡಿಯನ್ ಗ್ಯಾಸ್ ಮಾಲೀಕ ಸನ್ನಿ ಅಯ್ಯಪ್ಪ ಉಪಸ್ಥಿತರಿದ್ದರು.