ಮೂರ್ನಾಡು, ಸೆ. 11 : ಸಮೀಪದ ಬಲಮುರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸ್ವಸಹಾಯ ಗುಂಪಿನವರು ಶ್ರಮದಾನ ನಡೆಸಿದರು.ಪಾಲೆಮಾಡುವಿನ ಮಾದೇಶ್ವರ, ಸ್ನೇಹ ಜೀವಿ ಸ್ವಸಹಾಯ ಗುಂಪಿನ ಪದಾಧಿಕಾರಿಗಳು ಶ್ರಮದಾನ ನಡೆಸಿ ಶಾಲಾ ಆವರಣದಲ್ಲಿ ಗಿಡಗಳನ್ನು ನೆಟ್ಟರು. ಈ ಸಂದರ್ಭ ಧರ್ಮಸ್ಥಳ ಯೋಜನೆಯ ಸೇವಾ ಪ್ರತಿನಿಧಿ ಟಿ.ಎಂ. ಕಾವೇರಿ, ಶಾಲಾ ಮುಖ್ಯ ಶಿಕ್ಷಕಿ ಸುನೀತ, ಶಿಕ್ಷಕ ವೃಂದದವರು ಹಾಜರಿದ್ದರು.