ನಾಪೆÇೀಕ್ಲು, ಸೆ. 14: ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಉಜ್ವಲ ಯೋಜನೆಯಡಿಯಲ್ಲಿ ಬಿ.ಪಿ.ಎಲ್. ಕಾರ್ಡುದಾರರಿಗೆ ಉಚಿತ ಅಡುಗೆ ಅನಿಲ ಗ್ಯಾಸ್ ವಿತರಣೆ ಕಾರ್ಯಕ್ರಮ ತಾ. 15 ರಂದು (ಇಂದು) ನಾಪೆÇೀಕ್ಲು ಕೊಡವ ಸಮಾಜದಲ್ಲಿ ನಡೆಯಲಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಮುರುಳೀಧರ್ ತಿಳಿಸಿದರು.

ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಕಾರ್ಯಕ್ರಮಕ್ಕೆ ಲೋಕಸಭಾ ಸದಸ್ಯ ಪ್ರತಾಪ್ ಸಿಂಹ, ಶಾಸಕ ಕೆ.ಜಿ. ಬೋಪಯ್ಯ, ಎಂ.ಎಲ್.ಸಿ. ಸುನಿಲ್ ಸುಬ್ರಮಣಿ, ಕೇಂದ್ರ ಸರಕಾರದ ಪುರಸ್ಕøತ ಯೋಜನೆಯ ನಿರ್ದೇಶಕ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್, ತಾಲೂಕು ಪಂಚಾಯಿತಿ ಅಧ್ಯಕ್ಷೆ ಶೋಭಾ ಮೋಹನ್, ಉಪಾದ್ಯಕ್ಷ ಸಂತು ಸುಬ್ರಮಣಿ, ಜಿಲ್ಲಾ ಪಂಚಾಯಿತಿ ಸದಸ್ಯ ನೆಲ್ಲಚಂಡ ಕಿರಣ್ ಕಾರ್ಯಪ್ಪ ಮತ್ತಿತರು ಭಾಗವಹಿಸಲಿರುವರು, ಇದೇ ಸಂದರ್ಭ ಸಾರ್ವಜನಿಕರ ಹವಾಲನ್ನು ಸ್ವೀಕರಿಸಲಿರುವರು ಎಂದರು. ಗೋಷ್ಠಿಯಲ್ಲಿ ಆರ್.ಎಂ.ಸಿ. ಸದಸ್ಯ ಹಾಗೂ ವಲಯ ಬಿ.ಜೆ.ಪಿ. ಅಧ್ಯಕ್ಷ ಶಿವಚಾಳಿಯಂಡ ಅಂಬಿ ಕಾರ್ಯಪ್ಪ, ಗ್ರಾಮ ಪಂಚಾಯಿತಿ ಸದಸ್ಯ ಶಿವಚಾಳಿಯಂಡ ಜಗದೀಶ್, ಬಿ.ಜೆ.ಪಿ. ಪ್ರಕೋಷ್ಠದ ಸಹ ಸಂಚಾಲಕ ಪಾಡಿಯಮ್ಮಂಡ ಮನು ಮಹೇಶ್, ಬಿ.ಜೆ.ಪಿ. ಪ್ರಧಾನ ಕಾರ್ಯದರ್ಶಿ ಕನ್ನಂಬೀರ ಸುಧಿ ತಿಮ್ಮಯ್ಯ, ಮಾಜಿ ಬಿ.ಜೆ.ಪಿ. ಅಧ್ಯಕ್ಷ ಕುಂಡ್ಯೋಳಂಡ ರಮೇಶ್ ಮುದ್ದಯ್ಯ ಇದ್ದರು.