ಸಿದ್ದಾಪುರ, ಸೆ. 15 : ಪಾಲಿಬೆಟ್ಟದಲ್ಲಿ ಬೂತ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಮಹಿಳಾ ಸಮಾಜ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ರಾಜ್ಯದ ಪ್ರಧಾನ ಕಾರ್ಯದರ್ಶಿ ಹುಸೈನ್ ಕಾಂಗ್ರೆಸ್ ಪಕ್ಷವು ಬಡವರ ಪರ ಪಕ್ಷವಾಗಿದ್ದು, ಎಲ್ಲಾ ಸಮುದಾಯದವರು ಸೇರಿರುವಂತಹ ಅತೀ ದೊಡ್ಡ ಪಕ್ಷವಾಗಿದೆ ಎಂದರು.

ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಬಲಪಡಿಸುವ ನಿಟ್ಟಿನಲ್ಲಿ ಪಕ್ಷದ ಮುಖಂಡರು, ಮುಖ್ಯ ಮಂತ್ರಿಗಳು, ರಾಜ್ಯಾಧ್ಯಕ್ಷರು ಸೇರಿದಂತೆ ಎಲ್ಲರು ತಾ. 23ರಂದು ಮನೆ ಮನೆಗೆ ತೆರಳಿ ಪಕ್ಷವನ್ನು ಸಂಘಟಿಸಲು ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗುವ ದೆಂದರು, ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಜಿಲ್ಲೆಯ ಎರಡು ಸ್ಥಾನಗಳನ್ನು ಕಾಂಗ್ರೆಸ್ ಪಕ್ಷ ಪಡೆಯುತ್ತದೆ ಎಂದು ಭವಿಷ್ಯ ನುಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವು ಮಾದಪ್ಪ ಮಾತನಾಡಿ, ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಲು ಹಾಗೂ ಬಲಪಡಿಸಲು ಕಾರ್ಯಕರ್ತ ರಿಗೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ವೀರಾಜಪೇಟೆ ಬ್ಲಾಕ್ ಅಧ್ಯಕ್ಷ ಆರ್.ಕೆ ಸಲಾಂ ಬೂತ್ ಮಟ್ಟದ ಕಾರ್ಯ ಕರ್ತರ ಪಟ್ಟಿಯನ್ನು ತಯಾರಿಸಿ ದರು. ಕಾರ್ಯಕ್ರಮದಲ್ಲಿ ವೀರಾಜಪೇಟೆ ಬ್ಲಾಕಿನ ಮಹಿಳಾ ಘಟಕದ ಅಧ್ಯಕ್ಷೆ ಕಾವೇರಮ್ಮ, ಕಾರ್ಯ ದರ್ಶಿಗಳಾದ ಗಾಯತ್ರಿ ನರಸಿಂಹ, ಪೊನ್ನಕ್ಕಿ ಗಣೇಶ್, ಪಕ್ಷದ ಮುಖಂಡರುಗಳಾದ ಮಾಳೇಟ್ಟಿರ ಸಾಬು ಕಾಳಪ್ಪ, ವಾಟೇರಿರ ಸುರೇಶ್, ಪಿ.ವಿ. ಜಾನ್ಸನ್, ಜಿಲ್ಲಾ ಪಂಚಾಯಿತಿ ಸದಸ್ಯ ಲೀಲಾವತಿ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೆಜಿತ್ ಕುಮಾರ್, ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮ್ಮಣ್ಣ, ಇನ್ನಿತರರು ಹಾಜರಿದ್ದರು.