ಮಡಿಕೇರಿ, ಸೆ. 16: ಕರ್ನಾಟಕ ನಾಯರ್ ಸೇವಾ ಸಂಘದ ಆಶ್ರಯದಲ್ಲಿ ತಾ. 17ರಂದು (ಇಂದು) ನಗರದ ಓಂಕಾರ ಸದನದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಓಣಂ ಪ್ರಯುಕ್ತ ಕಾರ್ಯಕ್ರಮ ಆಯೋಜಿಸಿದ್ದು, ವಿಧಾನಪರಿಷತ್ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ ಉದ್ಘಾಟಿಸಲಿದ್ದಾರೆ. ಸಂಘದ ಅಧ್ಯಕ್ಷೆ ರಜನಿರಾಜನ್ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ‘ಶಕ್ತಿ’ ಪ್ರಧಾನ ಸಂಪಾದಕ ಜಿ. ರಾಜೇಂದ್ರ, ವಕೀಲ ವಿ. ವಿಜಯಕುಮಾರ್, ಕೆ.ಎನ್.ಎಸ್.ಎಸ್. ಉಪಾಧ್ಯಕ್ಷ ಪಿ.ಕೆ.ಎಸ್. ಪಿಳ್ಳೆ ಹಾಗೂ ಕೆ.ಕೆ. ಗಂಗಾಧರನ್ ನಾಯರ್, ಯು.ವಿ. ನಾಯರ್ ಮೊದಲಾದವರು ಪಾಲ್ಗೊಳ್ಳಲಿದ್ದಾರೆ.

ಸಮಾಜದ ಮಹಿಳೆಯರಿಂದ ತಿರುವತಿರ ಕಳಿ ಇತ್ಯಾದಿ ಸಾಂಸ್ಕøತಿಕ ಕಾರ್ಯಕ್ರಮ ಮೂಡಿ ಬರಲಿದ್ದು, ಶೈಕ್ಷಣಿಕ ಸಾಧನೆ ತೋರಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲಾಗುವದು ಎಂದು ಪ್ರಕಟಣೆ ತಿಳಿಸಿದೆ.