ಮಡಿಕೇರಿ, ಸೆ. 18: ಮಾಜಿ ಸಚಿವ ಹಾಗೂ ಶಾಸಕ ಖಮರುಲ್ ಇಸ್ಲಾಂ ಅವರ ನಿಧನಕ್ಕೆ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಸಂತಾಪ ಸೂಚಿಸಿದೆ.ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಕೆ.ಎ.ಯಾಕೂಬ್ ಅಧ್ಯಕ್ಷತೆಯಲ್ಲಿ ಸಂತಾಪ ಸಭೆ ನಡೆಯಿತು.

ಮೈಸೂರು ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸಿ. ರಫೀಕ್ ಅಹಮ್ಮದ್ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿ, ಖಮರುಲ್ ಇಸ್ಲಾಂ ಅಗಲಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಆಘಾತವುಂಟಾಗಿದೆ ಎಂದರು.

ಮೂಡಾ ಮಾಜಿ ಅಧ್ಯಕ್ಷೆ ಸುರಯ್ಯಾ ಅಬ್ರಾರ್, ನಗರಸಭೆಯ ಮಾಜಿ ಅಧಕ್ಷೆ ಜುಲೇಕಾಬಿ, ಪ್ರಧಾನ ಕಾರ್ಯದರ್ಶಿ ಖಾಲಿದ್ ಹಾಕತ್ತೂರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಅಬ್ಬಾಸ್ ಹಾಜಿ, ಅಬ್ದುಲ್ ರೆಹಮಾನ್, ಮ್ಯಾಥ್ಯು, ಕೆ.ಎ.ಬಶೀರ್, ಫೌಲಸ್ ಮತ್ತಿತರರು ಸಂತಾಪ ಸಭೆಯಲ್ಲಿ ಪಾಲ್ಗೊಂಡಿದ್ದರು.