ಮಡಿಕೇರಿ,ಸೆ.18 : ವೀರಾಜಪೇಟೆಯ ಬಾಳುಗೋಡಿನಲ್ಲಿರುವ ಕೊಡವ ಸಮಾಜಗಳ ಒಕ್ಕೂಟದಿಂದ ಕೈಲ್ ಪೊಳ್ದ್ ಸಂತೋಷ ಕೂಟ ಸಡಗರ ಹಾಗೂ ಸಂಭ್ರಮೋಲ್ಲಾಸದಿಂದ ಜರುಗಿತು.

ಎರಡನೇ ವರ್ಷದ ಕೈಲ್ ಪೊಳ್ದ್ ಸಂತೋಷ ಕೂಟವನ್ನು ಕೊಡವ ಸಮಾಜಗಳ ಒಕ್ಕೂಟ ಮತ್ತು ಮಹಿಳಾ ವಿಭಾಗ ಜಂಟಿಯಾಗಿ ಆಯೋಜಿಸಿತ್ತು.

ಒಕ್ಕೂಟದ ಗೌರವ ಕಾರ್ಯದರ್ಶಿ ಶಂಕರಿ ಪೂವಯ್ಯ ನೇತೃತ್ವದಲ್ಲಿ ಸಾಂಪ್ರದಾಯಿಕ ಆಯುಧ ಪೂಜಾ ಕೈಂಕರ್ಯ ಶ್ರದ್ದಾಭಕ್ತಿಯಿಂದ ನಡೆಸಲಾಯಿತು.

ಕ್ರೀಡಾಕೂಟಗಳು ನಡೆದವು, ಪುರುಷರಿಗೆ ತೆಂಗಿನ ಕಾಯಿಗೆ ಗುಂಡು ಹೊಡೆಯುವದು, ಮಹಿಳೆಯರಿಗೆ ಹೌಸಿ ಹೌಸಿ, ಸಂಗೀತ ಕುರ್ಚಿ ಸೇರಿದಂತೆ ವಿವಿಧ ಸ್ಪರ್ಧೆಗಳು ನಡೆದವು. ಸಭಾ ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ, ಉಪಾಧ್ಯಕ್ಷ ಮಂಡೇಡ ರವಿ ಉತ್ತಪ್ಪ, ಮಹಿಳಾ ವಿಭಾಗದ ಕಾರ್ಯದರ್ಶಿ ಬೊಳ್ಳಮ್ಮ ನಾಣಯ್ಯ, ಖಜಾಂಚಿ ಕಳ್ಳಿಚಂಡ ಶಾಲಿನಿ ಕಾರ್ಯಪ್ಪ ಮತ್ತಿತರರು ಪಾಲ್ಗೊಂಡಿದ್ದರು.